ಮೈಸೂರು: ಇಲ್ಲಿನ ವಿಜಯನಗರದ ಕಲ್ಯಾಣ ಮಂಟಪದಲ್ಲಿಂದು ಹೂಟಗಳ್ಳಿಯ ವಿದ್ಯಾ ಹಾಗೂ ನೆದರ್ಲ್ಯಾಂಡ್ ರುಟ್ಗೆರ್ ವಚನ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ವಿದ್ಯಾ ಪೋಷಕರಾದ ಸೋಮಶೇಖರಪ್ಪ ಮತ್ತು ಪ್ರೇಮಾ ಹಾಗೂ ರುಟ್ಗೆರ್ ಪೋಷಕರಾದ ಬಾಬ್ವಾನ್ ಬೊ ಇಜೆನ್ ಮತ್ತು ಜಾಕ್ವಿಲಿನ್ ಕನ್ನಡ ಮತ್ತು ಇಂಗ್ಲೀಷಿನಲ್ಲಿ ವಚನಗಳನ್ನು ಸ್ತುತಿಸಿ ವಿವಾಹಕ್ಕೆ ಒಪ್ಪಿಗೆ ನೀಡಿದರು.
ವರ ವಧುವಿಗೆ ಮಾಂಗ್ಯಧಾರಣೆ ಮಾಡಿದರೆ, ವಧು ವರನಿಗೆ ರುದ್ರಾಕ್ಷಿ ಧಾರಣೆ ಮಾಡುವ ಮೂಲಕ ಸಮಾನತೆಯ ತತ್ವಕ್ಕೆ ವಚನ ಮಾಂಗಲ್ಯ ಸಾಕ್ಷಿಯಾಯಿತು.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣು ವಿಶ್ವವಚನ ಫೌಂಡೇಶನ್ ಸಂಸ್ಥಾಪಕರಾದ ವಚನ ಕುಮಾರಸ್ವಾಮಿ ಮತ್ತು ರೂಪಾ ಕುಮಾರಸ್ವಾಮಿ ವಚನ ಪ್ರತಿಜ್ಞೆ ಬೋಧಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…