ಮೈಸೂರು: ಇಲ್ಲಿನ ವಿಜಯನಗರದ ಕಲ್ಯಾಣ ಮಂಟಪದಲ್ಲಿಂದು ಹೂಟಗಳ್ಳಿಯ ವಿದ್ಯಾ ಹಾಗೂ ನೆದರ್ಲ್ಯಾಂಡ್ ರುಟ್ಗೆರ್ ವಚನ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ವಿದ್ಯಾ ಪೋಷಕರಾದ ಸೋಮಶೇಖರಪ್ಪ ಮತ್ತು ಪ್ರೇಮಾ ಹಾಗೂ ರುಟ್ಗೆರ್ ಪೋಷಕರಾದ ಬಾಬ್ವಾನ್ ಬೊ ಇಜೆನ್ ಮತ್ತು ಜಾಕ್ವಿಲಿನ್ ಕನ್ನಡ ಮತ್ತು ಇಂಗ್ಲೀಷಿನಲ್ಲಿ ವಚನಗಳನ್ನು ಸ್ತುತಿಸಿ ವಿವಾಹಕ್ಕೆ ಒಪ್ಪಿಗೆ ನೀಡಿದರು.
ವರ ವಧುವಿಗೆ ಮಾಂಗ್ಯಧಾರಣೆ ಮಾಡಿದರೆ, ವಧು ವರನಿಗೆ ರುದ್ರಾಕ್ಷಿ ಧಾರಣೆ ಮಾಡುವ ಮೂಲಕ ಸಮಾನತೆಯ ತತ್ವಕ್ಕೆ ವಚನ ಮಾಂಗಲ್ಯ ಸಾಕ್ಷಿಯಾಯಿತು.
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಪಾಂಡೋಮಟ್ಟಿ ವಿರಕ್ತಮಠದ ಗುರುಬಸವ ಸ್ವಾಮೀಜಿ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶರಣು ವಿಶ್ವವಚನ ಫೌಂಡೇಶನ್ ಸಂಸ್ಥಾಪಕರಾದ ವಚನ ಕುಮಾರಸ್ವಾಮಿ ಮತ್ತು ರೂಪಾ ಕುಮಾರಸ್ವಾಮಿ ವಚನ ಪ್ರತಿಜ್ಞೆ ಬೋಧಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…