ಮೈಸೂರು ನಗರ

ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಹೆಚ್ಚಳ

ಮೈಸೂರು: ಇತ್ತೀಚೆಗೆ ಜರ್ಮನ್, ಆಫ್ರಿಕಾದಿಂದ ತಂದಿರುವ ಹಂಟರ್ ಗೊರಿಲ್ಲಾ, ಚೀತಾ, ಜಾಗ್ವಾರ್ ಸೇರಿದಂತೆ ಅನೇಕ ಪ್ರಾಣಿಗಳನ್ನು ಸಾಕುವ ವೆಚ್ಚ ಬಲು ದುಬಾರಿಯಾದ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಮೃಗಾಲಯದ ದರವನ್ನು ಏರಿಕೆ ಮಾಡಲಾಗುತ್ತಿದೆ ಎಂದು ಮೃಗಾಲಯ ಕಾರ್ಯನಿರ್ವಾಹಕ ಅಧಿಕಾರಿ ರಂಗಸ್ವಾಮಿ ಹೇಳಿದ್ದಾರೆ.

ನಾಳೆಯಿಂದ ಮೈಸೂರು ಮೃಗಾಲಯದ ಪ್ರವೇಶ ದರ ಶೇಡಕಾ.20 ರಷ್ಟು ಹೆಚ್ಚಳವಾಗಲಿದೆ. ನಾಲ್ಕು ವರ್ಷಗಳ ನಂತರ ದರ ಪರಿಷ್ಕರಣೆ ಮಾಡಲಾಗಿದ್ದು, ವಯಸ್ಕರಿಗೆ 100ರೂ ಇದ್ದ ಟಿಕೆಟ್ ದರ 120 ರೂಗೆ ಏರಿಕೆಯಾಗಿದೆ. ಮಕ್ಕಳಿಗೆ 50 ರೂ ಇದ್ದ ದರ 60ಕ್ಕೆ ಏರಿಕೆಯಾಗಿದೆ. ಮೃಗಾಲಯ, ಕಾರಂಜಿ ಕಾಂಬೋಗೆ ವಯಸ್ಕರಿಗೆ 150 ರೂ ನಿಗದಿಯಾಗಿದ್ದು, ಮಕ್ಕಳಿಗೆ 80 ರೂ ನಿಗದಿ ಮಾಡಲಾಗಿದೆ.

ಈ ಕುರಿತು ಮಾತನಾಡಿದ ಮೃಗಾಲಯ ಕಾರ್ಯನಿರ್ವಾಹಕ ಅಧಿಕಾರಿ ರಂಗಸ್ವಾಮಿ ಅವರು, ಒಂದು ದಿನಕ್ಕೆ ಮೃಗಾಲಯದ ನಿರ್ವಹಣೆಗೆ ಸುಮಾರು 9 ಲಕ್ಷ ಖರ್ಚಾಗುತ್ತಿದೆ. ಮೃಗಾಲಯದ ಪ್ರಾಣಿಗಳ ಖರ್ಚುವೆಚ್ಚ ತುಟ್ಟಿಯಾಗಿರುವ ಹಿನ್ನೆಲೆಯಲ್ಲಿ ನಾಲ್ಕು ವರ್ಷಗಳ ಬಳಿಕ ಮೃಗಾಲಯದ ಪ್ರವೇಶ ದರದಲ್ಲಿ ಏರಿಕೆ ಮಾಡಲಾಗಿದೆ. ಇತ್ತೀಚೆಗೆ ಜರ್ಮನ್, ಆಫ್ರಿಕಾದಿಂದ ತಂದಿರುವ ಹಂಟರ್ ಗೊರಿಲ್ಲಾ, ಚೀತಾ, ಜಾಗ್ವಾರ್ ಸೇರಿದಂತೆ ಪ್ರಾಣಿಗಳನ್ನು ಸಾಕುವ ವೆಚ್ಚ ದುಬಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ದರ ಏರಿಕೆ ಮಾಡಲಾಗುತ್ತಿದೆ. ಆದ್ದರಿಂದ ಪ್ರವಾಸಿಗರು ದರ ಏರಿಕೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

50 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

55 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

1 hour ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

1 hour ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

10 hours ago