ಮೈಸೂರು ನಗರ

ಮೈಸೂರಿನ ಕುವೆಂಪು ಮನೆ ಇನ್ಮುಂದೆ ಸ್ಮಾರಕ : ಸರ್ಕಾರದ ಘೋಷಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಮೈಸೂರಿನ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಅವರು ಗಮನ ಸೆಳೆಯುವ ಸೂಚನೆಯಲ್ಲಿ ವಿಷಯ ಪ್ರಸ್ತಾಪಿಸಿದರು.

ಸರ್ಕಾರದ ಪರವಾಗಿ ಉತ್ತರಿಸಿದ ನಗರ ಅಭಿವೃದ್ದಿ ಸಚಿವ ಭೈರತಿ ಸುರೇಶ್, ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ಹಲವಾರು ವರ್ಷಗಳ ಕಾಲ ವಾಸ ಮಾಡಿದ್ದರು. ಇಲ್ಲಿಯೇ ಅನೇಕ ಕೃತಿಗಳನ್ನು ಸಹ ರಚಿಸಿದ್ದರು. ಅವರು ಇದ್ದ ನಿವಾಸವನ್ನು ಸ್ಮಾರಕ ಮಾಡಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

ಸ್ಮಾರಕ ನಿರ್ಮಾಣ ಹಾಗೂ ಮ್ಯೂಸಿಯಂ ಮಾಡಲು ಅಗತ್ಯವಿರುವ ಆರ್ಥಿಕ ನೆರವನ್ನು ಸರ್ಕಾರ ನೀಡಲಿದೆ ಎಂದರು.

ಕುವೆಂಪು ಅವರು ವಾಸ ಮಾಡಿದ್ದ ನಿವಾಸವನ್ನು ಯಾವ ರೀತಿ ಪುನರ್ನವೀಕರಣ ಮಾಡಬೇಕು ಎಂಬುದರ ಕುರಿತು ಸದ್ಯದಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು. ಮುಂದಿನ ಪೀಳಿಗೆಗೆ ಅವರ ವಿಚಾರಧಾರೆಗಳು ತಿಳಿಯಬೇಕಾದ ಅಗತ್ಯವಿರುವುದರಿಂದ ಸರ್ಕಾರ ಎಲ್ಲಾ ನೆರವು ನೀಡಲು ಬದ್ಧವಿದೆ ಎಂದು ಆಶ್ವಾಸನೆ ನೀಡಿದರು.

ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ಶಾಸಕ ಹರೀಶ್ ಗೌಡ ಅವರು, ರಾಷ್ಟ್ರಕವಿ ಕುವೆಂಪು ಅವರು ಅನೇಕ ವರ್ಷಗಳ ಕಾಲ ಮೈಸೂರಿನಲ್ಲಿ ವಾಸ ಮಾಡಿದ್ದರು‌ ಅವರ ವಿದ್ಯಾಭ್ಯಾಸವು ಇಲ್ಲಿಯೇ ನಡೆದಿತ್ತು. ಅನೇಕ ಕಾವ್ಯಗಳು, ಕಾದಂಬರಿಗಳನ್ನು ಇಲ್ಲಿಯೇ ರಚಿಸಿ, ತಮ್ಮ ಜೀವನದ ಕೊನೆಯ ದಿನಗಳನ್ನು ಇಲ್ಲಿಯೇ ಕಳೆದಿದ್ದರು. ಹೀಗಾಗಿ ಅವರ ಮನೆಯನ್ನು ಸ್ಮಾರಕ ಹಾಗೂ ಮ್ಯೂಸಿಯಂ ನಿರ್ಮಿಸಲು ಸರ್ಕಾರ ತ್ವರಿತ ಕ್ರಮ ತೆಗೆದುಕೊಳ್ಳಬೇಕೆಂದು ಮನವಿ ಮಾಡಿದರು.

ಇಂದು ಮೈಸೂರಿಗೆ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪ್ರವಾಸಿಗರು ಬಂದಾಗ ಅನೇಕ ಸಾಹಿತ್ಯ ಆಸಕ್ತರು ಈ ಮನೆಗೆ ತಪ್ಪದೇ ಬಂದು ಭೇಟಿ ನೀಡುತ್ತಾರೆ . ನಿವಾಸವು ದಿನ ಕಳೆದಂತೆ ಹಾಳಾಗುತ್ತ ಹೋಗುತ್ತದೆ‌. ಸರ್ಕಾರ ಕೂಡಲೇ ವಿಶೇಷ ಕಾಳಜಿ ವಹಿಸಿ ಮ್ಯೂಸಿಯ ಮತ್ತು ಸ್ಮಾರಕ ನಿರ್ಮಾಣ ಮಾಡಲು ಮುಂದಾದರೆ ಮುಂದಿನ ಯುವ ಜನಾಂಗಕ್ಕೆ ಕುವೆಂಪು ಅವರ ಸಾಹಿತ್ಯ ಚಿಂತನೆ ಉಳಿಯುತ್ತದೆ ಎಂದು ಅಭಿಪ್ರಾಯಪಟ್ಟರು.

ಸರ್ಕಾರದ ಪ್ರತಿನಿಧಿಗಳು ಕುವೆಂಪು ನಿವಾಸಕ್ಕೆ ಭೇಟಿ ನೀಡಿ, ಅವರ ಪುತ್ರಿ ತಾರುಣಿಯವರ ಜೊತೆ ಮಾತನಾಡಿದ್ದಾರೆ. ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಅವರು ತಾತ್ವಿಕ ಒಪ್ಪಿಗೆ ಕೊಟ್ಟು, ಕೆಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ಈಡೇರಿಸಲಿ ಎಂದು ಹರೀಶ್ ಗೌಡ ಒತ್ತಾಯಿಸಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

36 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago