ಮೈಸೂರು: “ಮಹಾರಾಜ ಕಾಲೇಜು-ಒಂದು ಚಾರಿತ್ರಿಕ ಬೆಳವಣಿಗೆ (1833-1956)” ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆ ನಡೆಸಿ ಮಾಹಿತಿಗಳನ್ನು ಗ್ರಂಥ ರೂಪದಲ್ಲಿ ಪ್ರಕಟಿಸಲು ಮೈಸೂರು ವಿಶ್ವವಿದ್ಯಾನಿಲಯವು ದಿ ಮಿಥಿಕ್ ಸೊಸೈಟಿಯೊಡನೆ ಒಡಂಬಡಿಕೆಗೆ ಸಹಿ ಹಾಕಿದೆ.
ಮಹಾರಾಜ ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ರೋಹಿತ ಈಶ್ವರ, ಡಾ. ಪವಮಾನ ಹಾಗೂ ಡಾ. ಗ್ಯಾವಿನ್ ಜೂಡ್ ವಿಲ್ಸನ್ ರವರು ಸಂಶೋಧನೆಯಲ್ಲಿದ್ದಾರೆ. ಇವರೊಂದಿಗೆ ಇತಿಹಾಸಕಾರರಾದ ಡಾ. ನರೇಂದ್ರ ಪ್ರಸಾದ್ ಇರಲಿದ್ದಾರೆ. ಭಾರತದ ಪತ್ರಗಾರ ಹಾಗೂ ಇತರ ಗ್ರಂಥಾಲಯಗಳಲ್ಲಿ ಲಭ್ಯವಿರುವ ಎಲ್ಲಾ ದಾಖಲಿತ ಮಾಹಿತಿಯ ಸಂಗ್ರಹಣೆ ಮಾಡಿ ಗ್ರಂಥ ರಚಿಸಲಾಗುವುದು.
ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾದ ಎಂ.ಕೆ. ಸವಿತಾ, ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಅವರ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಹಾಕಿದರು. ಪರೀಕ್ಷಾ ಕುಲ ಸಚಿವರಾದ ಡಾ.ಎನ್.ನಾಗರಾಜು, ಹಣಕಾಸು ಅಧಿಕಾರಿ ರೇಖಾ ಉಪಸ್ಥಿತರಿದ್ದರು.
ಮಿಥಿಕ್ ಸೊಸೈಟಿಯ ಗೌರವ ಕಾರ್ಯದರ್ಶಿ ಡಾ.ಎಸ್ ರವಿ ಅವರು ಮಿಥಿಕ್ ಸೊಸೈಟಿಯ ಪರವಾಗಿ ಒಡಂಬಡಿಕೆಗೆ ಸಹಿ ಹಾಕಿದರು.
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…
ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…
ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…
ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…
ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…