ಮೈಸೂರು ನಗರ

ಮೈಸೂರು: ʼಮಹಾರಾಜ ಕಾಲೇಜಿನ ಚರಿತ್ರೆʼ ಗ್ರಂಥ ರೂಪಕ್ಕಿಳಿಸಲು ಒಡಂಬಡಿಕೆ

ಮೈಸೂರು: “ಮಹಾರಾಜ ಕಾಲೇಜು-ಒಂದು ಚಾರಿತ್ರಿಕ ಬೆಳವಣಿಗೆ (1833-1956)” ವಿಷಯಕ್ಕೆ ಸಂಬಂಧಿಸಿದಂತೆ ಸಂಶೋಧನೆ ನಡೆಸಿ ಮಾಹಿತಿಗಳನ್ನು ಗ್ರಂಥ ರೂಪದಲ್ಲಿ ಪ್ರಕಟಿಸಲು ಮೈಸೂರು ವಿಶ್ವವಿದ್ಯಾನಿಲಯವು ದಿ ಮಿಥಿಕ್ ಸೊಸೈಟಿಯೊಡನೆ ಒಡಂಬಡಿಕೆಗೆ ಸಹಿ ಹಾಕಿದೆ.

ಮಹಾರಾಜ ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ರೋಹಿತ ಈಶ್ವರ, ಡಾ. ಪವಮಾನ ಹಾಗೂ ಡಾ. ಗ್ಯಾವಿನ್ ಜೂಡ್ ವಿಲ್ಸನ್ ರವರು ಸಂಶೋಧನೆಯಲ್ಲಿದ್ದಾರೆ. ಇವರೊಂದಿಗೆ ಇತಿಹಾಸಕಾರರಾದ ಡಾ. ನರೇಂದ್ರ ಪ್ರಸಾದ್ ಇರಲಿದ್ದಾರೆ. ಭಾರತದ ಪತ್ರಗಾರ ಹಾಗೂ ಇತರ ಗ್ರಂಥಾಲಯಗಳಲ್ಲಿ ಲಭ್ಯವಿರುವ ಎಲ್ಲಾ ದಾಖಲಿತ ಮಾಹಿತಿಯ ಸಂಗ್ರಹಣೆ ಮಾಡಿ ಗ್ರಂಥ ರಚಿಸಲಾಗುವುದು.

ಮೈಸೂರು ವಿಶ್ವವಿದ್ಯಾಲಯದ ಕುಲಸಚಿವರಾದ ಎಂ.ಕೆ. ಸವಿತಾ, ಕುಲಪತಿ ಪ್ರೊ. ಎನ್.ಕೆ. ಲೋಕನಾಥ್‌ ಅವರ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಹಾಕಿದರು. ಪರೀಕ್ಷಾ ಕುಲ ಸಚಿವರಾದ ಡಾ.ಎನ್.ನಾಗರಾಜು, ಹಣಕಾಸು ಅಧಿಕಾರಿ ರೇಖಾ ಉಪಸ್ಥಿತರಿದ್ದರು.

ಮಿಥಿಕ್ ಸೊಸೈಟಿಯ ಗೌರವ ಕಾರ್ಯದರ್ಶಿ ಡಾ.ಎಸ್ ರವಿ ಅವರು ಮಿಥಿಕ್ ಸೊಸೈಟಿಯ ಪರವಾಗಿ ಒಡಂಬಡಿಕೆಗೆ ಸಹಿ ಹಾಕಿದರು.

ಆಂದೋಲನ ಡೆಸ್ಕ್

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

5 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

13 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

13 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

13 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

16 hours ago