ಮೈಸೂರು ನಗರ

ಮೈಸೂರು| ರಂಗೋಲಿಯಲ್ಲಿ ಅರಳಿದ ಅಪ್ಪು: ಅಶ್ವಿನಿ ಶ್ಲಾಘನೆ

ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು

ಮೈಸೂರು: ಕನ್ನಡ ಚಿತ್ರರಂಗದ ಮೇರು ನಟ ಪುನೀತ್ ರಾಜಕುಮಾರ್ ಅವರನ್ನು ಭೇಟಿಯಾಗಬೇಕು ಎಂಬ ಬಯಕೆ ಎಲ್ಲರಿಗೂ ಇದ್ದೇ ಇರುತ್ತಿತ್ತು, ಆದರೆ ಅವರು ಮರಣ ಹೊಂದಿದ್ದಾರೆ. ಈಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಯಾದರೆ ತಮ್ಮ ಮೆಚ್ಚಿನ ನಟನನ್ನು ನೋಡಿದಷ್ಟು ಅನುಭವ ಅಭಿಮಾನಿಗಳಿಗೆ ಆಗುತ್ತದೆ. ಅದರಂತೆ ಮೈಸೂರಿನ ಚಿತ್ರಕಲಾ ತಂಡದವರು ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಮೈಸೂರಿನ ಪುನೀತ್ ಹಾಗೂ ಅವರ ರಂಗೋಲಿ ಕಲೆಗೆ ಜೊತೆಗೂಡಿ ಕೆಲಸವನ್ನು ಮಾಡುತ್ತಿರುವ ಕಲಾವಿದರು ಭೇಟಿಯಾಗಿದ್ದರು.

ಕೆಲವು ದಿನಗಳ ಹಿಂದೆ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಸುಮಾರು 8200 ಎತ್ತರದ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಮೂರು ದಿನಗಳ ಕಾಲ ಪರಿಶ್ರಮ ದಿಂದ ಬಣ್ಣ ಬಣ್ಣದ ರಂಗೋಲಿ ಮೂಲಕ ಬಿಡಿಸಿದ್ದರು. ಅದನ್ನು ವರ್ಡ್ ಗಿನ್ನಿಸ್ ರೆಕಾರ್ಡ್ ದಾಖಲೆಗೂ ಕಳುಹಿಸಿದ್ದಾರೆ.

ಈ ತಂಡವು ಪ್ರತಿಷ್ಟಿತ ಗಣ್ಯ ವ್ಯಕ್ತಿಗಳ ಬಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಜನರ ಮೆಚ್ಚುಗೆಗೂ ಸಹ ಪಾತ್ರರಾಗಿದ್ದಾರೆ. ಅದರ ಜೊತೆಗೆ ಪುನೀತ್ ರಾಜಕುಮಾರ್ ಅವರ ಕುಟುಂಬದ ಭಾವಚಿತ್ರವನ್ನು ಬಿಡಿಸಿ ಅಶ್ವಿನಿ ಅವರಿಗೆ ಭಾವಚಿತ್ರವನ್ನು ನೀಡಿದ್ದಾರೆ.

ರಂಗೋಲಿಯಲ್ಲಿ ಮೂಡಿದ ಪುನೀತ್ ರಾಜಕುಮಾರ್ ಅವರ ಬಾವಚಿತ್ರವನ್ನು ನೋಡಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಖುಷಿ ಪಟ್ಟು ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ. ಹಾಗೂ ಇದೇ ರೀತಿಯ ಒಳ್ಳೊಳ್ಳೆ ಚಿತ್ರಗಳು ಮೂಡಿ ಬರಲಿ ಎಂದು ಪುನೀತ್ ಕಲಾವಿದರ ತಂಡ ಸಾಧನೆ ಮಟ್ಟಕ್ಕೆ ಹೆರಲಿ ಎಂದು ಶುಭ ಹಾರೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಸಾವಿರಾರು ಸೈನಿಕರ ಜೀವನ್ಮರಣದ ಪ್ರಶ್ನೆಯಾಗಿತ್ತು

ಕೈಲಾಶ್ ಶ್ರೇಣಿಯ ರೇಚಿನ್ ಲಾ ಪಾಸ್‌ನತ್ತ ಮುನ್ನುಗ್ಗುತ್ತಿರುವ ಚೀನಾದ ಟ್ಯಾಂಕ್‌ಗಳನ್ನು ತಡೆಯಲು ಒಂದೇ ಒಂದು ಗುಂಡು ಹಾರಿಸಿದರೂ ಆ ದೇಶದೊಂದಿಗೆ…

1 hour ago

ಸಹಸ್ರಾರು ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ಅಮಾನ್ಯ

ಬೋಗಸ್ ಕಾರ್ಡ್ ಹೆಸರಿನಲ್ಲಿ ಕ್ರಮ; ನೈಜ ಕಾರ್ಮಿಕರಿಗೆ ಸಮಸ್ಯೆ ಕೃಷ್ಣ ಸಿದ್ದಾಪುರ ಸಿದ್ದಾಪುರ: ಕಟ್ಟಡ ಮತ್ತು ಇತರೇ ನಿರ್ಮಾಣ ಕಾರ್ಮಿಕರ ಕಲ್ಯಾಣ…

1 hour ago

ದೇವರಗುಡ್ಡನಾಗಬೇಕಿದ್ದ ದುಂಡು ಮಾದೇವಸ್ವಾಮಿ ಚಿತ್ರಗಾರನಾದ ವೃತ್ತಾಂತ

ಸ್ವಾಮಿ ಪೊನ್ನಾಚಿ ದಿನಬೆಳಗಾದರೆ ಮಾದಪ್ಪ, ಮಂಟೇಸ್ವಾಮಿಯ ಹಾಡು ಹಾಡಿಕೊಂಡು ಬರುವ ಜನಪದರ ದಂಡು. ಸುತ್ತಮುತ್ತ ದೇವರಗುಡ್ಡ ನೀಲಗಾರರ ಹಿಂಡು. ಊರೂರಿ…

1 hour ago

ಅಪ್ಪಾಜಿಯ ವಾತ್ಸಲ್ಯದ ಛಡಿಯೇಟಿನ ‘ಪಾಠ’ಗಳು ನೆನಪಾಗುತ್ತಿವೆ…

ರವಿ ಕೋಟಿ ಬಾಲ್ಯದಲ್ಲಿ ನಾನು ಕಂಟ್ರೋಲಿಗೆ ಬರದಷ್ಟು ತುಂಟನಾಗಿದ್ದೆ. ಯಾರೂ ನನ್ನನ್ನು ಕಂಟ್ರೋಲ್ ಮಾಡಲಾಗುತ್ತಿರಲಿಲ್ಲ. ಯಾಕೆಂದರೆ ನಾನೇ ನನ್ನ ಕಂಟ್ರೋಲಿನಲ್ಲಿ…

1 hour ago

ಹೀಗಾದರೂ ಆದರೆ ಭ್ರಮೆಗಳು ಕರಗಿ ಆಧ್ಯಾತ್ಮಿಕ ವಿನಯದ ಪರಿಚಯವಾಗಬಹುದೇನೋ…

ಸುಕನ್ಯಾ ಕನಾರಳ್ಳಿ ಒಂದು ಮಠ. ಅಲ್ಲಿ ಮರಿಸ್ವಾಮಿಯಾಗಿದ್ದವರು ಪೀಠಾಧಿಪತಿ ತೀರಿಕೊಂಡ ಮೇಲೆ ಏನೇನೋ ಕಾರಣಗಳ ದೆಸೆಯಿಂದ ಪೀಠವನ್ನು ಏರಲು ಆಗದೆ…

2 hours ago

ಅಳಿಯುತ್ತಿರುವ ಸೋಬಾನೆ ಹಾಡುಗಳ ಕಲಿಸುತ್ತಿರುವ ಕಲೆಗಾರ

ಡಾ.ಮೈಸೂರು ಉಮೇಶ್ ಸೋಬಾನೆ ಪದಗಳು ಗ್ರಾಮೀಣ ಮಹಿಳೆಯರಿಗೆ ಒಲಿದು ಬಂದಿರುವ ಜನಪದ ಗಾಯನ ಪ್ರಕಾರ. ಇದಕ್ಕೆ ಅಪವಾದವೆಂಬಂತೆ ಮಂಡ್ಯ ಜಿಲ್ಲೆಯ…

2 hours ago