ಮೈಸೂರು ನಗರ

ಮೈಸೂರು| ರಂಗೋಲಿಯಲ್ಲಿ ಅರಳಿದ ಅಪ್ಪು: ಅಶ್ವಿನಿ ಶ್ಲಾಘನೆ

ಪ್ರಶಾಂತ್ ಎನ್ ಮಲ್ಲಿಕ್, ಮೈಸೂರು

ಮೈಸೂರು: ಕನ್ನಡ ಚಿತ್ರರಂಗದ ಮೇರು ನಟ ಪುನೀತ್ ರಾಜಕುಮಾರ್ ಅವರನ್ನು ಭೇಟಿಯಾಗಬೇಕು ಎಂಬ ಬಯಕೆ ಎಲ್ಲರಿಗೂ ಇದ್ದೇ ಇರುತ್ತಿತ್ತು, ಆದರೆ ಅವರು ಮರಣ ಹೊಂದಿದ್ದಾರೆ. ಈಗ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಯಾದರೆ ತಮ್ಮ ಮೆಚ್ಚಿನ ನಟನನ್ನು ನೋಡಿದಷ್ಟು ಅನುಭವ ಅಭಿಮಾನಿಗಳಿಗೆ ಆಗುತ್ತದೆ. ಅದರಂತೆ ಮೈಸೂರಿನ ಚಿತ್ರಕಲಾ ತಂಡದವರು ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ಭೇಟಿಯಾಗಿದ್ದಾರೆ.

ಮೈಸೂರಿನ ಪುನೀತ್ ಹಾಗೂ ಅವರ ರಂಗೋಲಿ ಕಲೆಗೆ ಜೊತೆಗೂಡಿ ಕೆಲಸವನ್ನು ಮಾಡುತ್ತಿರುವ ಕಲಾವಿದರು ಭೇಟಿಯಾಗಿದ್ದರು.

ಕೆಲವು ದಿನಗಳ ಹಿಂದೆ ಪುನೀತ್ ರಾಜಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಸುಮಾರು 8200 ಎತ್ತರದ ಪುನೀತ್ ರಾಜಕುಮಾರ್ ಅವರ ಭಾವಚಿತ್ರವನ್ನು ಮೂರು ದಿನಗಳ ಕಾಲ ಪರಿಶ್ರಮ ದಿಂದ ಬಣ್ಣ ಬಣ್ಣದ ರಂಗೋಲಿ ಮೂಲಕ ಬಿಡಿಸಿದ್ದರು. ಅದನ್ನು ವರ್ಡ್ ಗಿನ್ನಿಸ್ ರೆಕಾರ್ಡ್ ದಾಖಲೆಗೂ ಕಳುಹಿಸಿದ್ದಾರೆ.

ಈ ತಂಡವು ಪ್ರತಿಷ್ಟಿತ ಗಣ್ಯ ವ್ಯಕ್ತಿಗಳ ಬಾವಚಿತ್ರವನ್ನು ರಂಗೋಲಿಯಲ್ಲಿ ಬಿಡಿಸಿ ಜನರ ಮೆಚ್ಚುಗೆಗೂ ಸಹ ಪಾತ್ರರಾಗಿದ್ದಾರೆ. ಅದರ ಜೊತೆಗೆ ಪುನೀತ್ ರಾಜಕುಮಾರ್ ಅವರ ಕುಟುಂಬದ ಭಾವಚಿತ್ರವನ್ನು ಬಿಡಿಸಿ ಅಶ್ವಿನಿ ಅವರಿಗೆ ಭಾವಚಿತ್ರವನ್ನು ನೀಡಿದ್ದಾರೆ.

ರಂಗೋಲಿಯಲ್ಲಿ ಮೂಡಿದ ಪುನೀತ್ ರಾಜಕುಮಾರ್ ಅವರ ಬಾವಚಿತ್ರವನ್ನು ನೋಡಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಖುಷಿ ಪಟ್ಟು ಮೆಚ್ಚುಗೆ ಸಹ ವ್ಯಕ್ತಪಡಿಸಿದ್ದಾರೆ. ಹಾಗೂ ಇದೇ ರೀತಿಯ ಒಳ್ಳೊಳ್ಳೆ ಚಿತ್ರಗಳು ಮೂಡಿ ಬರಲಿ ಎಂದು ಪುನೀತ್ ಕಲಾವಿದರ ತಂಡ ಸಾಧನೆ ಮಟ್ಟಕ್ಕೆ ಹೆರಲಿ ಎಂದು ಶುಭ ಹಾರೈಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 hour ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

2 hours ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

2 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

15 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

17 hours ago