ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.
ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ಸಿಂಹಾಸನ ಜೋಡಣೆಯು ವಿಧಿ ವಿಧಾನದಂತೆ ನೆರೆವೇರಿತ್ತು. ಬಳಿಕ ಪಟ್ಟದ ಹಸು, ಕುದುರೆ, ಆನೆ, ಅಶ್ವಗಳೂ ಗೋ ಶಾಲೆಗೆ ಆಗಮಿಸಿದವು.
ಜೋಡಣೆ ಹೇಗೆ?
ಅರಮನೆಯ ಸ್ಟ್ರಾಂಗ್ ರೂಂ ನಲ್ಲಿರುವ ಸಿಂಹಾಸನವನ್ನು ಟ್ರಾಲಿ ಮೂಲಕ ದರ್ಬಾರ್ ಹಾಲ್ಗೆ ತರಲಾಗುತ್ತದೆ. ಸಿಂಹಾಸನದಲ್ಲಿ ಅಧೋಭಾಗ, ಮಧ್ಯಭಾಗ, ಮೇಲ್ಭಾಗ ಎಂಬ ಮೂರು ಭಾಗಗಳಿವೆ. ಜತೆಗ ಮುಖ್ಯ ಆಸನ, ಮೆಟ್ಟಿಲು ಮತ್ತು ಬಂಗಾರದ ಛತ್ರಿಯಿದೆ. ಈ ರಾಜಗದ್ದುಗೆಯನ್ನು ಮೂಲತಃ ಅಂಜೂರ ಮರದಿಂದ ತಯಾರಿಸಲಾಗಿದೆ. ಇದಕ್ಕೆ ಆನೆಯ ದಂತ ಪಟ್ಟಿಗಳನ್ನು ಸಹ ಅಳವಡಿಸಲಾಗಿದೆ. ಈ ಎಲ್ಲಾ ಭಾಗಗಳನ್ನು ಬೇರ್ಪಡಿಸಿ ಮತ್ತೆ ಜೋಡೆಣೆ ಮಾಡುವ ತಾಂತ್ರಿಕತೆ ಇದೆ. ಈ ಜೋಡಣೆಯು ಒಂದು ಕಲೆಯಾಗಿದೆ.
ಜತೆಗೆ ಈ ಸಿಂಹಾಸನವನ್ನು ಜೋಡಿಸುವ ಕೆಲಸವನ್ನು ಗೆಜ್ಜಗಳ್ಳಿಯ ಗ್ರಾಮಸ್ಥರು ನಿರ್ವಹಿಸುತ್ತಾರೆ. ರಾಜ ಮಹಾರಾಜರ ಕಾಲದಿಂದಲೂ ಇವರೇ ಸಿಂಹಾಸನ ಜೋಡಣೆಯ ಸಿದ್ಧಹಸ್ತರು. ಅರಮನೆಯ ಪರಿಚಾರಕರು ಗೆಜ್ಜೆಗಳ್ಳಿಗೆ ಹೋಗಿ ವೀಳ್ಯ ಕೊಟ್ಟು ಆಹ್ವಾನ ನೀಡುತ್ತಾರೆ.
ಹೊಸದಿಲ್ಲಿ : ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ 2019ರ ಫೆಬ್ರವರಿ 14ರಂದು ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಸಿಬ್ಬಂದಿಗೆ…
ಮೋರನ್ : ಪ್ರಧಾನಿ ನರೇಂದ್ರ ಮೋದಿ ಅವರು ಅಸ್ಸಾಂನ ಮೋರಂನಲ್ಲಿರುವ ಸಿ-130ಜೆ ವಿಮಾನದಲ್ಲಿ ಈಶಾನ್ಯದ ಮೊದಲ ತುರ್ತು ಲ್ಯಾಂಡಿಂಗ್ ಸೌಲಭ್ಯ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…
ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…
• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…
ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…