ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.
ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ಸಿಂಹಾಸನ ಜೋಡಣೆಯು ವಿಧಿ ವಿಧಾನದಂತೆ ನೆರೆವೇರಿತ್ತು. ಬಳಿಕ ಪಟ್ಟದ ಹಸು, ಕುದುರೆ, ಆನೆ, ಅಶ್ವಗಳೂ ಗೋ ಶಾಲೆಗೆ ಆಗಮಿಸಿದವು.
ಜೋಡಣೆ ಹೇಗೆ?
ಅರಮನೆಯ ಸ್ಟ್ರಾಂಗ್ ರೂಂ ನಲ್ಲಿರುವ ಸಿಂಹಾಸನವನ್ನು ಟ್ರಾಲಿ ಮೂಲಕ ದರ್ಬಾರ್ ಹಾಲ್ಗೆ ತರಲಾಗುತ್ತದೆ. ಸಿಂಹಾಸನದಲ್ಲಿ ಅಧೋಭಾಗ, ಮಧ್ಯಭಾಗ, ಮೇಲ್ಭಾಗ ಎಂಬ ಮೂರು ಭಾಗಗಳಿವೆ. ಜತೆಗ ಮುಖ್ಯ ಆಸನ, ಮೆಟ್ಟಿಲು ಮತ್ತು ಬಂಗಾರದ ಛತ್ರಿಯಿದೆ. ಈ ರಾಜಗದ್ದುಗೆಯನ್ನು ಮೂಲತಃ ಅಂಜೂರ ಮರದಿಂದ ತಯಾರಿಸಲಾಗಿದೆ. ಇದಕ್ಕೆ ಆನೆಯ ದಂತ ಪಟ್ಟಿಗಳನ್ನು ಸಹ ಅಳವಡಿಸಲಾಗಿದೆ. ಈ ಎಲ್ಲಾ ಭಾಗಗಳನ್ನು ಬೇರ್ಪಡಿಸಿ ಮತ್ತೆ ಜೋಡೆಣೆ ಮಾಡುವ ತಾಂತ್ರಿಕತೆ ಇದೆ. ಈ ಜೋಡಣೆಯು ಒಂದು ಕಲೆಯಾಗಿದೆ.
ಜತೆಗೆ ಈ ಸಿಂಹಾಸನವನ್ನು ಜೋಡಿಸುವ ಕೆಲಸವನ್ನು ಗೆಜ್ಜಗಳ್ಳಿಯ ಗ್ರಾಮಸ್ಥರು ನಿರ್ವಹಿಸುತ್ತಾರೆ. ರಾಜ ಮಹಾರಾಜರ ಕಾಲದಿಂದಲೂ ಇವರೇ ಸಿಂಹಾಸನ ಜೋಡಣೆಯ ಸಿದ್ಧಹಸ್ತರು. ಅರಮನೆಯ ಪರಿಚಾರಕರು ಗೆಜ್ಜೆಗಳ್ಳಿಗೆ ಹೋಗಿ ವೀಳ್ಯ ಕೊಟ್ಟು ಆಹ್ವಾನ ನೀಡುತ್ತಾರೆ.
ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ. ಮಂಡ್ಯ ಕೋರ್ಟ್ಗೆ…
ಬೆಂಗಳೂರು: ಎಲ್ಲಾ ಧರ್ಮದವರೂ ದೇಶದಲ್ಲಿರುವಾಗ ವಂದೇ ಮಾತರಂ ರಾಷ್ಟ್ರಗೀತೆ ಆಗಲು ಸಾಧ್ಯವಿಲ್ಲ ಎಂದು ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ಕೇಂದ್ರ ಸರ್ಕಾರದ ವಿರುದ್ಧ…
ಮಡಿಕೇರಿ: ಮಡಿಕೇರಿ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಸಿಬ್ಬಂದಿ ಕೆಲಕಾಲ ಆತಂಕ್ಕೀಡಾಗಿದ್ದರು. ಇತ್ತೀಚಿನ ದಿನಗಳಲ್ಲಿ ದಿನದಿಂದ ದಿನಕ್ಕೆ ಬಾಂಬ್…
ನಟ ದರ್ಶನ್ ಅವರಿಗೆ ಇಂದು 49ನೇ ಹುಟ್ಟುಹಬ್ಬದ ಸಂಭ್ರಮ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಬೆಂಗಳೂರಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಣಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೈರನತ್ತ ಗ್ರಾಮದಲ್ಲಿ ಕಳೆದ…
ಚಿಕ್ಕಬಳ್ಳಾಪುರ: ಮಹಾಶಿವರಾತ್ರಿ ಸಂಭ್ರಮದ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಚಿಕ್ಕಬಳ್ಳಾಪುರದ ಈಶಾ ಫೌಂಡೇಶನ್ಗೆ ಆಗಮಿಸಿದ್ದರು. ಎಲ್ಲೆಡೆ ಶಿವನಾಮ ಸ್ಮರಣೆ ಕೇಳಿಬರುತ್ತಿದೆ. ಈ…