ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.
ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ಸಿಂಹಾಸನ ಜೋಡಣೆಯು ವಿಧಿ ವಿಧಾನದಂತೆ ನೆರೆವೇರಿತ್ತು. ಬಳಿಕ ಪಟ್ಟದ ಹಸು, ಕುದುರೆ, ಆನೆ, ಅಶ್ವಗಳೂ ಗೋ ಶಾಲೆಗೆ ಆಗಮಿಸಿದವು.
ಜೋಡಣೆ ಹೇಗೆ?
ಅರಮನೆಯ ಸ್ಟ್ರಾಂಗ್ ರೂಂ ನಲ್ಲಿರುವ ಸಿಂಹಾಸನವನ್ನು ಟ್ರಾಲಿ ಮೂಲಕ ದರ್ಬಾರ್ ಹಾಲ್ಗೆ ತರಲಾಗುತ್ತದೆ. ಸಿಂಹಾಸನದಲ್ಲಿ ಅಧೋಭಾಗ, ಮಧ್ಯಭಾಗ, ಮೇಲ್ಭಾಗ ಎಂಬ ಮೂರು ಭಾಗಗಳಿವೆ. ಜತೆಗ ಮುಖ್ಯ ಆಸನ, ಮೆಟ್ಟಿಲು ಮತ್ತು ಬಂಗಾರದ ಛತ್ರಿಯಿದೆ. ಈ ರಾಜಗದ್ದುಗೆಯನ್ನು ಮೂಲತಃ ಅಂಜೂರ ಮರದಿಂದ ತಯಾರಿಸಲಾಗಿದೆ. ಇದಕ್ಕೆ ಆನೆಯ ದಂತ ಪಟ್ಟಿಗಳನ್ನು ಸಹ ಅಳವಡಿಸಲಾಗಿದೆ. ಈ ಎಲ್ಲಾ ಭಾಗಗಳನ್ನು ಬೇರ್ಪಡಿಸಿ ಮತ್ತೆ ಜೋಡೆಣೆ ಮಾಡುವ ತಾಂತ್ರಿಕತೆ ಇದೆ. ಈ ಜೋಡಣೆಯು ಒಂದು ಕಲೆಯಾಗಿದೆ.
ಜತೆಗೆ ಈ ಸಿಂಹಾಸನವನ್ನು ಜೋಡಿಸುವ ಕೆಲಸವನ್ನು ಗೆಜ್ಜಗಳ್ಳಿಯ ಗ್ರಾಮಸ್ಥರು ನಿರ್ವಹಿಸುತ್ತಾರೆ. ರಾಜ ಮಹಾರಾಜರ ಕಾಲದಿಂದಲೂ ಇವರೇ ಸಿಂಹಾಸನ ಜೋಡಣೆಯ ಸಿದ್ಧಹಸ್ತರು. ಅರಮನೆಯ ಪರಿಚಾರಕರು ಗೆಜ್ಜೆಗಳ್ಳಿಗೆ ಹೋಗಿ ವೀಳ್ಯ ಕೊಟ್ಟು ಆಹ್ವಾನ ನೀಡುತ್ತಾರೆ.
ಈ ವರ್ಷ ಬಿಡುಗಡೆಯಾದ ವಿನಯ್ ರಾಜಕುಮಾರ್ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರದ ನಂತರ ಒಂದಿಷ್ಟು ಹೊಸ ಚಿತ್ರದ ಕೆಲಸಗಳಲ್ಲಿ…
ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂಎಲ್ಸಿ ಟಿಕೆಟ್ಗಾಗಿ…
ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ…
ಬೆಂಗಳೂರು: ಸಚಿವ ಭೈರತಿ ಸುರೇಶ್ ಅವರು ಮುಡಾದಿಂದ ಫೈಲ್ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್ರನ್ನು ತಕ್ಷಣ ಬಂಧಿಸಬೇಕು…
ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕೇಂದ್ರ…
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಸ್ಪತ್ರೆಗೆ…