ಮೈಸೂರು ನಗರ

Mysuru dasara: ರತ್ನ ಖಚಿತ ಸಿಂಹಾನ ಜೋಡಣೆ ಪೂರ್ಣ: ಅ.3ರಿಂದ ಖಾಸಗಿ ದರ್ಬಾರ್‌ ಆರಂಭ

ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್‌ ನಡೆಯಲಿದೆ.

ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್‌ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ಸಿಂಹಾಸನ ಜೋಡಣೆಯು ವಿಧಿ ವಿಧಾನದಂತೆ ನೆರೆವೇರಿತ್ತು. ಬಳಿಕ ಪಟ್ಟದ ಹಸು, ಕುದುರೆ, ಆನೆ, ಅಶ್ವಗಳೂ ಗೋ ಶಾಲೆಗೆ ಆಗಮಿಸಿದವು.

ಜೋಡಣೆ ಹೇಗೆ?
ಅರಮನೆಯ ಸ್ಟ್ರಾಂಗ್‌ ರೂಂ ನಲ್ಲಿರುವ ಸಿಂಹಾಸನವನ್ನು ಟ್ರಾಲಿ ಮೂಲಕ ದರ್ಬಾರ್‌ ಹಾಲ್‌ಗೆ ತರಲಾಗುತ್ತದೆ. ಸಿಂಹಾಸನದಲ್ಲಿ ಅಧೋಭಾಗ, ಮಧ್ಯಭಾಗ, ಮೇಲ್ಭಾಗ ಎಂಬ ಮೂರು ಭಾಗಗಳಿವೆ. ಜತೆಗ ಮುಖ್ಯ ಆಸನ, ಮೆಟ್ಟಿಲು ಮತ್ತು ಬಂಗಾರದ ಛತ್ರಿಯಿದೆ. ಈ ರಾಜಗದ್ದುಗೆಯನ್ನು ಮೂಲತಃ ಅಂಜೂರ ಮರದಿಂದ ತಯಾರಿಸಲಾಗಿದೆ. ಇದಕ್ಕೆ ಆನೆಯ ದಂತ ಪಟ್ಟಿಗಳನ್ನು ಸಹ ಅಳವಡಿಸಲಾಗಿದೆ. ಈ ಎಲ್ಲಾ ಭಾಗಗಳನ್ನು ಬೇರ್ಪಡಿಸಿ ಮತ್ತೆ ಜೋಡೆಣೆ ಮಾಡುವ ತಾಂತ್ರಿಕತೆ ಇದೆ. ಈ ಜೋಡಣೆಯು ಒಂದು ಕಲೆಯಾಗಿದೆ.

ಜತೆಗೆ ಈ ಸಿಂಹಾಸನವನ್ನು ಜೋಡಿಸುವ ಕೆಲಸವನ್ನು ಗೆಜ್ಜಗಳ್ಳಿಯ ಗ್ರಾಮಸ್ಥರು ನಿರ್ವಹಿಸುತ್ತಾರೆ. ರಾಜ ಮಹಾರಾಜರ ಕಾಲದಿಂದಲೂ ಇವರೇ ಸಿಂಹಾಸನ ಜೋಡಣೆಯ ಸಿದ್ಧಹಸ್ತರು. ಅರಮನೆಯ ಪರಿಚಾರಕರು ಗೆಜ್ಜೆಗಳ್ಳಿಗೆ ಹೋಗಿ ವೀಳ್ಯ ಕೊಟ್ಟು ಆಹ್ವಾನ ನೀಡುತ್ತಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

‘ದೇವರು ರುಜು ಮಾಡಿದನು’ ಎಂದ ಸಿಂಪಲ್ ಸುನಿ; ಶೀರ್ಷಿಕೆ ಅನಾವರಣ

ಈ ವರ್ಷ ಬಿಡುಗಡೆಯಾದ ವಿನಯ್‍ ರಾಜಕುಮಾರ್‍ ಅಭಿನಯದ ‘ಒಂದು ಸರಳ ಪ್ರೇಮಕಥೆ’ ಚಿತ್ರದ ನಂತರ ಒಂದಿಷ್ಟು ಹೊಸ ಚಿತ್ರದ ಕೆಲಸಗಳಲ್ಲಿ…

13 mins ago

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಅರೆಸ್ಟ್

ಬೆಂಗಳೂರು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಹೋದರ ಗೋಪಾಲ್‌ ಜೋಶಿಯನ್ನು ಪೊಲೀಸರು ಬಂಧಿಸಿದ್ದಾರೆ. ಎಂಎಲ್‌ಸಿ ಟಿಕೆಟ್‌ಗಾಗಿ…

50 mins ago

ರಾಜ್ಯದಲ್ಲಿ ಹಿಂದಿ ಹೇರಿಕೆ: ತಮಿಳುನಾಡು ರಾಜ್ಯಪಾಲ ರವಿ ವಿರುದ್ಧ ಧ್ವನಿ ಎತ್ತಿದ ಎಂ.ಕೆ.ಸ್ಟಾಲಿನ್

ಚೆನ್ನೈ: ಹಿಂದಿ ಮಾಸಾಚರಣೆ ನೆಪದಲ್ಲಿ ಕೇಂದ್ರ ಸರ್ಕಾರದಿಂದ ನೇಮಕವಾದ ರಾಜ್ಯಪಾಲರು ದೇಶದ ಏಕತೆಯನ್ನು ಮರೆತು, ಕೇಂದ್ರ ಯೋಜನೆಗಳು ಮತ್ತು ಘೋಷಣೆಗಳಂತೆ…

60 mins ago

ಮುಡಾ ಫೈಲ್ ಸುಟ್ಟು ಹಾಕಿರುವ ಭೈರತಿ ಸುರೇಶ್ ರನ್ನು ತಕ್ಷಣ ಬಂಧಿಸಿ: ಶೋಭಾ ಕರಂದಾಜ್ಲೆ ಆಗ್ರಹ

ಬೆಂಗಳೂರು: ಸಚಿವ ಭೈರತಿ ಸುರೇಶ್‌ ಅವರು ಮುಡಾದಿಂದ ಫೈಲ್‌ಗಳನ್ನು ತಂದು ಸುಟ್ಟು ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಸುರೇಶ್‌ರನ್ನು ತಕ್ಷಣ ಬಂಧಿಸಬೇಕು…

1 hour ago

ಕೆಂಪೇಗೌಡರು ಕಟ್ಟಿದ ಕೆರೆಗಳನ್ನೆಲ್ಲಾ ಹಣದ ದಾಹಕ್ಕೆ ನುಂಗಿದ್ದಾರೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ…

1 hour ago

ಮಾಜಿ ಸಿಎಂ ಎಸ್.ಎಂ.ಕೃಷ್ಣ ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್‌.ಎಂ.ಕೃಷ್ಣ ಅವರು ಅನಾರೋಗ್ಯದಿಂದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಸ್ಪತ್ರೆಗೆ…

2 hours ago