ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.
ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ಸಿಂಹಾಸನ ಜೋಡಣೆಯು ವಿಧಿ ವಿಧಾನದಂತೆ ನೆರೆವೇರಿತ್ತು. ಬಳಿಕ ಪಟ್ಟದ ಹಸು, ಕುದುರೆ, ಆನೆ, ಅಶ್ವಗಳೂ ಗೋ ಶಾಲೆಗೆ ಆಗಮಿಸಿದವು.
ಜೋಡಣೆ ಹೇಗೆ?
ಅರಮನೆಯ ಸ್ಟ್ರಾಂಗ್ ರೂಂ ನಲ್ಲಿರುವ ಸಿಂಹಾಸನವನ್ನು ಟ್ರಾಲಿ ಮೂಲಕ ದರ್ಬಾರ್ ಹಾಲ್ಗೆ ತರಲಾಗುತ್ತದೆ. ಸಿಂಹಾಸನದಲ್ಲಿ ಅಧೋಭಾಗ, ಮಧ್ಯಭಾಗ, ಮೇಲ್ಭಾಗ ಎಂಬ ಮೂರು ಭಾಗಗಳಿವೆ. ಜತೆಗ ಮುಖ್ಯ ಆಸನ, ಮೆಟ್ಟಿಲು ಮತ್ತು ಬಂಗಾರದ ಛತ್ರಿಯಿದೆ. ಈ ರಾಜಗದ್ದುಗೆಯನ್ನು ಮೂಲತಃ ಅಂಜೂರ ಮರದಿಂದ ತಯಾರಿಸಲಾಗಿದೆ. ಇದಕ್ಕೆ ಆನೆಯ ದಂತ ಪಟ್ಟಿಗಳನ್ನು ಸಹ ಅಳವಡಿಸಲಾಗಿದೆ. ಈ ಎಲ್ಲಾ ಭಾಗಗಳನ್ನು ಬೇರ್ಪಡಿಸಿ ಮತ್ತೆ ಜೋಡೆಣೆ ಮಾಡುವ ತಾಂತ್ರಿಕತೆ ಇದೆ. ಈ ಜೋಡಣೆಯು ಒಂದು ಕಲೆಯಾಗಿದೆ.
ಜತೆಗೆ ಈ ಸಿಂಹಾಸನವನ್ನು ಜೋಡಿಸುವ ಕೆಲಸವನ್ನು ಗೆಜ್ಜಗಳ್ಳಿಯ ಗ್ರಾಮಸ್ಥರು ನಿರ್ವಹಿಸುತ್ತಾರೆ. ರಾಜ ಮಹಾರಾಜರ ಕಾಲದಿಂದಲೂ ಇವರೇ ಸಿಂಹಾಸನ ಜೋಡಣೆಯ ಸಿದ್ಧಹಸ್ತರು. ಅರಮನೆಯ ಪರಿಚಾರಕರು ಗೆಜ್ಜೆಗಳ್ಳಿಗೆ ಹೋಗಿ ವೀಳ್ಯ ಕೊಟ್ಟು ಆಹ್ವಾನ ನೀಡುತ್ತಾರೆ.
ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…
ಮಡಿಕೇರಿ: ಮಾರ್ಚ್ನಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…
ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…
ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…
ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…