ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.
ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ಸಿಂಹಾಸನ ಜೋಡಣೆಯು ವಿಧಿ ವಿಧಾನದಂತೆ ನೆರೆವೇರಿತ್ತು. ಬಳಿಕ ಪಟ್ಟದ ಹಸು, ಕುದುರೆ, ಆನೆ, ಅಶ್ವಗಳೂ ಗೋ ಶಾಲೆಗೆ ಆಗಮಿಸಿದವು.
ಜೋಡಣೆ ಹೇಗೆ?
ಅರಮನೆಯ ಸ್ಟ್ರಾಂಗ್ ರೂಂ ನಲ್ಲಿರುವ ಸಿಂಹಾಸನವನ್ನು ಟ್ರಾಲಿ ಮೂಲಕ ದರ್ಬಾರ್ ಹಾಲ್ಗೆ ತರಲಾಗುತ್ತದೆ. ಸಿಂಹಾಸನದಲ್ಲಿ ಅಧೋಭಾಗ, ಮಧ್ಯಭಾಗ, ಮೇಲ್ಭಾಗ ಎಂಬ ಮೂರು ಭಾಗಗಳಿವೆ. ಜತೆಗ ಮುಖ್ಯ ಆಸನ, ಮೆಟ್ಟಿಲು ಮತ್ತು ಬಂಗಾರದ ಛತ್ರಿಯಿದೆ. ಈ ರಾಜಗದ್ದುಗೆಯನ್ನು ಮೂಲತಃ ಅಂಜೂರ ಮರದಿಂದ ತಯಾರಿಸಲಾಗಿದೆ. ಇದಕ್ಕೆ ಆನೆಯ ದಂತ ಪಟ್ಟಿಗಳನ್ನು ಸಹ ಅಳವಡಿಸಲಾಗಿದೆ. ಈ ಎಲ್ಲಾ ಭಾಗಗಳನ್ನು ಬೇರ್ಪಡಿಸಿ ಮತ್ತೆ ಜೋಡೆಣೆ ಮಾಡುವ ತಾಂತ್ರಿಕತೆ ಇದೆ. ಈ ಜೋಡಣೆಯು ಒಂದು ಕಲೆಯಾಗಿದೆ.
ಜತೆಗೆ ಈ ಸಿಂಹಾಸನವನ್ನು ಜೋಡಿಸುವ ಕೆಲಸವನ್ನು ಗೆಜ್ಜಗಳ್ಳಿಯ ಗ್ರಾಮಸ್ಥರು ನಿರ್ವಹಿಸುತ್ತಾರೆ. ರಾಜ ಮಹಾರಾಜರ ಕಾಲದಿಂದಲೂ ಇವರೇ ಸಿಂಹಾಸನ ಜೋಡಣೆಯ ಸಿದ್ಧಹಸ್ತರು. ಅರಮನೆಯ ಪರಿಚಾರಕರು ಗೆಜ್ಜೆಗಳ್ಳಿಗೆ ಹೋಗಿ ವೀಳ್ಯ ಕೊಟ್ಟು ಆಹ್ವಾನ ನೀಡುತ್ತಾರೆ.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…