ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.
ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ಸಿಂಹಾಸನ ಜೋಡಣೆಯು ವಿಧಿ ವಿಧಾನದಂತೆ ನೆರೆವೇರಿತ್ತು. ಬಳಿಕ ಪಟ್ಟದ ಹಸು, ಕುದುರೆ, ಆನೆ, ಅಶ್ವಗಳೂ ಗೋ ಶಾಲೆಗೆ ಆಗಮಿಸಿದವು.
ಜೋಡಣೆ ಹೇಗೆ?
ಅರಮನೆಯ ಸ್ಟ್ರಾಂಗ್ ರೂಂ ನಲ್ಲಿರುವ ಸಿಂಹಾಸನವನ್ನು ಟ್ರಾಲಿ ಮೂಲಕ ದರ್ಬಾರ್ ಹಾಲ್ಗೆ ತರಲಾಗುತ್ತದೆ. ಸಿಂಹಾಸನದಲ್ಲಿ ಅಧೋಭಾಗ, ಮಧ್ಯಭಾಗ, ಮೇಲ್ಭಾಗ ಎಂಬ ಮೂರು ಭಾಗಗಳಿವೆ. ಜತೆಗ ಮುಖ್ಯ ಆಸನ, ಮೆಟ್ಟಿಲು ಮತ್ತು ಬಂಗಾರದ ಛತ್ರಿಯಿದೆ. ಈ ರಾಜಗದ್ದುಗೆಯನ್ನು ಮೂಲತಃ ಅಂಜೂರ ಮರದಿಂದ ತಯಾರಿಸಲಾಗಿದೆ. ಇದಕ್ಕೆ ಆನೆಯ ದಂತ ಪಟ್ಟಿಗಳನ್ನು ಸಹ ಅಳವಡಿಸಲಾಗಿದೆ. ಈ ಎಲ್ಲಾ ಭಾಗಗಳನ್ನು ಬೇರ್ಪಡಿಸಿ ಮತ್ತೆ ಜೋಡೆಣೆ ಮಾಡುವ ತಾಂತ್ರಿಕತೆ ಇದೆ. ಈ ಜೋಡಣೆಯು ಒಂದು ಕಲೆಯಾಗಿದೆ.
ಜತೆಗೆ ಈ ಸಿಂಹಾಸನವನ್ನು ಜೋಡಿಸುವ ಕೆಲಸವನ್ನು ಗೆಜ್ಜಗಳ್ಳಿಯ ಗ್ರಾಮಸ್ಥರು ನಿರ್ವಹಿಸುತ್ತಾರೆ. ರಾಜ ಮಹಾರಾಜರ ಕಾಲದಿಂದಲೂ ಇವರೇ ಸಿಂಹಾಸನ ಜೋಡಣೆಯ ಸಿದ್ಧಹಸ್ತರು. ಅರಮನೆಯ ಪರಿಚಾರಕರು ಗೆಜ್ಜೆಗಳ್ಳಿಗೆ ಹೋಗಿ ವೀಳ್ಯ ಕೊಟ್ಟು ಆಹ್ವಾನ ನೀಡುತ್ತಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…