ಮೈಸೂರು: ನಾಡಹಬ್ಬ ಮೈಸೂರು ದಸರಾಕ್ಕೆ ದಿನಗಣನೆ ಶುರುವಾಗಿದ್ದು, ಸಿದ್ಧತೆಯು ಜೋರಾಗಿದೆ. ಅಂಬಾವಿಲಾಸ ಅರಮನೆಯಲ್ಲಿ ರತ್ನ ಖಚಿತ ಸಿಂಹಾಸನದ ಜೋಡಣಾ ಕಾರ್ಯ ಇಂದು ಮುಗಿದಿದ್ದು, ಅ.3 ರಿಂದ ಖಾಸಗಿ ದರ್ಬಾರ್ ನಡೆಯಲಿದೆ.
ನವರಾತ್ರಿಯ ಸಮಯದಲ್ಲಿ ರಾಜವಂಶಸ್ಥರಿಂದ ಅರಮನೆಯಲ್ಲಿ ಖಾಸಗಿ ದರ್ಬಾರ್ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ, ಸಿಂಹಾಸನ ಜೋಡಣೆಯು ವಿಧಿ ವಿಧಾನದಂತೆ ನೆರೆವೇರಿತ್ತು. ಬಳಿಕ ಪಟ್ಟದ ಹಸು, ಕುದುರೆ, ಆನೆ, ಅಶ್ವಗಳೂ ಗೋ ಶಾಲೆಗೆ ಆಗಮಿಸಿದವು.
ಜೋಡಣೆ ಹೇಗೆ?
ಅರಮನೆಯ ಸ್ಟ್ರಾಂಗ್ ರೂಂ ನಲ್ಲಿರುವ ಸಿಂಹಾಸನವನ್ನು ಟ್ರಾಲಿ ಮೂಲಕ ದರ್ಬಾರ್ ಹಾಲ್ಗೆ ತರಲಾಗುತ್ತದೆ. ಸಿಂಹಾಸನದಲ್ಲಿ ಅಧೋಭಾಗ, ಮಧ್ಯಭಾಗ, ಮೇಲ್ಭಾಗ ಎಂಬ ಮೂರು ಭಾಗಗಳಿವೆ. ಜತೆಗ ಮುಖ್ಯ ಆಸನ, ಮೆಟ್ಟಿಲು ಮತ್ತು ಬಂಗಾರದ ಛತ್ರಿಯಿದೆ. ಈ ರಾಜಗದ್ದುಗೆಯನ್ನು ಮೂಲತಃ ಅಂಜೂರ ಮರದಿಂದ ತಯಾರಿಸಲಾಗಿದೆ. ಇದಕ್ಕೆ ಆನೆಯ ದಂತ ಪಟ್ಟಿಗಳನ್ನು ಸಹ ಅಳವಡಿಸಲಾಗಿದೆ. ಈ ಎಲ್ಲಾ ಭಾಗಗಳನ್ನು ಬೇರ್ಪಡಿಸಿ ಮತ್ತೆ ಜೋಡೆಣೆ ಮಾಡುವ ತಾಂತ್ರಿಕತೆ ಇದೆ. ಈ ಜೋಡಣೆಯು ಒಂದು ಕಲೆಯಾಗಿದೆ.
ಜತೆಗೆ ಈ ಸಿಂಹಾಸನವನ್ನು ಜೋಡಿಸುವ ಕೆಲಸವನ್ನು ಗೆಜ್ಜಗಳ್ಳಿಯ ಗ್ರಾಮಸ್ಥರು ನಿರ್ವಹಿಸುತ್ತಾರೆ. ರಾಜ ಮಹಾರಾಜರ ಕಾಲದಿಂದಲೂ ಇವರೇ ಸಿಂಹಾಸನ ಜೋಡಣೆಯ ಸಿದ್ಧಹಸ್ತರು. ಅರಮನೆಯ ಪರಿಚಾರಕರು ಗೆಜ್ಜೆಗಳ್ಳಿಗೆ ಹೋಗಿ ವೀಳ್ಯ ಕೊಟ್ಟು ಆಹ್ವಾನ ನೀಡುತ್ತಾರೆ.
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನ್ಕಕೆ ಸೂರ್ಯನ ಪ್ರತಾಪ ಹೆಚ್ಚಾಗುತ್ತಿದ್ದು, ಇಡೀ ಕರ್ನಾಟಕವೇ ಬಿಸಿಲಿನ ಕೆಂಡದಂತಾಗಿದೆ.. ಬಿಸಿಲಿನ ಝಳ ಹೆಚ್ಚಾಗಿರುವ ಕಾರಣ…
ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿಯ ಸೂತ್ರವನ್ನು ಹೆಣೆಯುವಲ್ಲಿ ಕರ್ನಾಟಕ ಸರ್ಕಾರ ಕೊನೆಗೂ ಯಶಸ್ವಿಯಾಗಿದೆ. ಪರಿಶಿಷ್ಟ ಜಾತಿಯ ಪಟ್ಟಿಯಲ್ಲಿರುವ ಬಲಗೈ, ಎಡಗೈಗೆ ತಲಾ…
ಪ್ರೊ.ಶಬ್ಬೀರ್ ಮುಸ್ತಾಫಾ ಜಿ.ಪಿ.ಬಸವರಾಜು ಸಮುದಾಯದ ನಂಬಿಕೆಯನ್ನು ಉಳಿಸಿಕೊಳ್ಳಬೇಕಾದದ್ದು ಕಾಂಗ್ರೆಸ್ ಪಕ್ಷದ ಹೊಣೆ ಭಾರತದಂಥ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಚುನಾವಣೆ ಎನ್ನುವುದು ನಿರಂತರ…
ಜನನಾಯಕನ ಪೌರುಷವನ್ನು ಕೆಣಕುತ್ತಿದ್ದಾರೆ ಸಿದ್ದು ಆಪ್ತರು ರಾಜ್ಯದ ಆಡಳಿತ ಯಂತ್ರದ ಚುರುಕಿಗೆ ಸಚಿವ ಸಂಪುಟ ಪುನರ್ರಚಿಸಬೇಕೆಂಬ ಒತ್ತಾಸೆಯೂ ಇದೆ ಕಳೆದ…
ನವೀನ್ ಡಿಸೋಜ ಚಾರಣಿಗರ ಸುರಕ್ಷತೆ, ಪ್ರಕೃತಿ ಸಂಪತ್ತಿನ ಉಳಿವಿಗೆ ಹೊಸ ಮಾರ್ಗಸೂಚಿ ಸಹಕಾರಿ; ಪರಿಣಾಮಕಾರಿಯಾಗಿ ಜಾರಿಗೊಳಿಸಲು ಒತ್ತಾಯ ಮಡಿಕೇರಿ: ಅರಣ್ಯ…
ವರಹಳ್ಳಿ ಆನಂದ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಶಾಲೆಯಲ್ಲೀಗ ಕಲಿಯುತ್ತಿರುವುದು ಕೇವಲ ೩೯ ಮಕ್ಕಳು ಮೈಸೂರು: ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ…