ಮೈಸೂರು : ನಾಡಹಬ್ಬ ದಸರಾ ಮಹೋತ್ಸವದ ಸಂಭ್ರಮಕ್ಕೂ ಮುನ್ನ ಸ್ಥಳೀಯ ಕಾಲೇಜು ಪ್ರತಿಭೆಗಳಿಗೆ ವೇದಿಕೆ ಕಲ್ಪಿಸಿಕೊಡಲು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಸಿಕೊಂಡು ಬರುತ್ತಿರುವ ಯುವ ಸಂಭ್ರಮವನ್ನು ಈ ಬಾರಿ ಸೆ.28ರಿಂದ ಅಕ್ಟೋಬರ್ 5 ರವರೆಗೆ ವಿಶೇಷವಾಗಿ ಆಯೋಜಿಸಲು ಉಪ ಸಮಿತಿ ನಿರ್ಧರಿಸಿದ್ದು, ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳ ಪ್ರಾಂಶುಪಾಲರ ಸಭೆಯನ್ನು ನಡೆಸಿ ಹಲವಾರು ಸಲಹೆಗಳನ್ನು ಸ್ವೀಕರಿಸಲಾಯಿತು.
ಮಹಾರಾಜ ಕಾಲೇಜು ಶತಮಾನೋತ್ಸವ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಾಂಶುಪಾಲರ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರು ಹಲವು ವಿಚಾರಗಳನ್ನು ಸಮಿತಿ ಗಮನಕ್ಕೆ ತಂದರು. ಯುವ ಸಂಭ್ರಮದಲ್ಲಿ ಪಾಲ್ಗೊಳ್ಳುವ ತಂಡಗಳು ಮತ್ತು ವಿಜೇತ ತಂಡಗಳಿಗೆ ಕೊಡುವ ಭತ್ಯೆಯನ್ನು ಹೆಚ್ಚಿಸಬೇಕು. ಇವೆಂಟ್ಗಳನ್ನು ಕಡಿಮೆ ಮಾಡುವ ಜತೆಗೆ, ಮತ್ತಷ್ಟು ದಿನಗಳನ್ನು ಹೆಚ್ಚಿಸಬೇಕು ಎಂದು ಹೇಳಿದರು.
ವಿದ್ಯಾರ್ಥಿಗಳು, ಸದಸ್ಯರು, ಮತ್ತಿತರರಿಗೆ ಗುಣಮಟ್ಟದ ಊಟ ನೀಡಬೇಕು. ಹಿಂದೆ ಕೆಲವರು ಊಟವನ್ನು ಬಿಸಾಡಿ ಹೋಗಿದ್ದಾರೆ. ಹಾಗಾಗಿ, ಶುಚಿ ಮತ್ತು ರುಚಿಯಾದ ಊಟ ಕೊಡುವ ಜತೆಗೆ, ವಾಷ್ ರೂಂಗಳಲ್ಲಿ ನೀರು ಒದಗಿಸಬೇಕು. ಪಾರ್ಕಿಂಗ್ ವ್ಯವಸ್ಥೆ, ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಸಲಹೆ ನೀಡಿದರು.
ಎನ್ಎಸ್ಎಸ್ ಹಾಗೂ ಇತರೆ ಅಧಿಕಾರಿಗಳು, ಸ್ವಯಂಸೇವಕರು ಶಿಸ್ತಾಗಿ ನಡೆದುಕೊಳ್ಳಬೇಕು. ವೇದಿಕೆ ಮುಂಭಾಗ ಹಾಗೂ ವೇದಿಕೆ ಮೇಲೆ ಅಶಿಸ್ತು ಇಲ್ಲದಂತೆ ಗಮನಿಸಬೇಕು. ಗೌರವಧನ ಹೆಚ್ಚಿಸಬೇಕು. ಕೊರಿಯೋಗ್ರಾಫರ್ಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಥೀಮ್ ಬೇಷ್ ಮೇಲೆ ಅತ್ಯುತ್ತಮ ಕಾಲೇಜುಗಳನ್ನು ಆಯ್ಕೆ ಮಾಡಬೇಕು. ಕೊರಿಯೋಗ್ರಾಫರ್ಗಳನ್ನು ಬಳಸಿಕೊಳ್ಳಬೇಕು. ಕಾರ್ಯಕ್ರಮಗಳು ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಲಾಯಿತು.
ಇವೆಂಟ್ಗಳನ್ನು ಕಡಿಮೆ ಮಾಡಿ ಹೆಚ್ಚು ದಿನ ಅವಕಾಶ ನೀಡಿದರೆ ಗುಣಮಟ್ಟದ ಜತೆಗೆ ಎಲ್ಲರಿಗೂ ಅವಕಾಶ ಸಿಗುವಂತೆ ಮಾಡಬೇಕು. ಒಂದೊಂದು ದಿನ ಜಾಸ್ತಿ ಆಯ್ಕೆ ಮಾಡಿದಷ್ಟು ಪುನರಾವರ್ತನೆಗೆ ದಾರಿಯಾಗಲಿದೆ ಎನ್ನುವ ಸಲಹೆಯನ್ನು ಸಮಿತಿ ಪರಿಗಣಿಸಿ ಕ್ರಮದ ಭರವಸೆ ನೀಡಿತು. ಯುವ ಸಂಭ್ರಮ ಉಪ ಸಮಿತಿ ಉಪ ವಿಶೇಷಾಧಿಕಾರಿ ಆರ್.ಐಶ್ವರ್ಯ, ಮೈಸೂರು ವಿವಿ ಪ್ರಭಾರ ಕುಲಸಚಿವ ಪ್ರೊ.ಎಸ್.ಜೆ.ಮಂಜುನಾಥ್, ಪ್ರಾದೇಶಿಕ ಶಿಕ್ಷಣ ಇಲಾಖೆ ಪ್ರಾದೇಶಿಕ ನಿರ್ದೇಶಕರಾದ ಎಸ್.ಪ್ರತಿಮಾ, ಡಿಡಿಪಿಯು ಸಿ.ನಾಗಮ್ಮ, ಪ್ರಾದೇಶಿಕ ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕ ನಾಗೇಂದ್ರಪ್ರಸಾದ್, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶಕ ಟಿ.ರಾಮಚಂದ್ರ, ಸಮಿತಿ ಕಾರ್ಯಾಧ್ಯಕ್ಷರಾದ ಪ್ರತಿಭಾ, ಸಹ ಕಾರ್ಯದರ್ಶಿಗಳಾದ ಪ್ರೊ.ಕೆ.ವೆಂಕಟೇಶ್, ಪ್ರೊ.ಎಂ.ಎಸ್.ಸಪ್ನಾ, ಪೂರ್ಣಶ್ರೀ, ಕಾರ್ಯದರ್ಶಿ ಮೈತ್ರಿ, ಸಮನ್ವಯಾಧಿಕಾರಿ ಆರ್.ನಿಂಗರಾಜು ಮತ್ತಿತರರು ಹಾಜರಿದ್ದರು.
ಬೆಂಗಳೂರು : ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಯ ಅವಧಿಯನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 30ರವರೆಗೆ ವಿಸ್ತರಿಸಿದೆ. 2023ರ…
ನವದೆಹಲಿ: ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 15ಕ್ಕೆ ಮುಂದೂಡಿದೆ. ಬಾಕಿ ಇರುವ 17 ಟಿಎಂಸಿ ನೀರನ್ನು…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹ ಹಾಗೂ ಭೂಕುಸಿತದಿಂದಾಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಸಾವಿನ ಸಂಖ್ಯೆ 903ಕ್ಕೆ ಏರಿಕೆಯಾಗಿದೆ. ಪ್ರವಾಹದ ರಭಸಕ್ಕೆ…
ಎಚ್.ಡಿ. ಕೋಟೆ: ತಾಲೂಕಿನ ಹೊಸ ಹುಳಲು ಗ್ರಾಮದಲ್ಲಿ ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ.…
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಕೇಂದ್ರ ಬಿಂದುವಾಗಿದ್ದು,…
ರೇಣುಕಾ ನಿಡಗುಂದಿ ಮತ್ತೆ ಸಿಗುವೆ.. ಆದರೆ ಎಲ್ಲಿ? ಹೇಗೆ ನನಗೂ ತಿಳಿಯದು, ಈ ನಶ್ವರ ಲೋಕದ ಹಂಗು ಆತ್ಮಕ್ಕಿಲ್ಲ ನಾ…