ಮೈಸೂರು ನಗರ

ಮೈಸೂರು ಪ್ರವಾಸಿ ಸ್ಥಳಗಳ ಪ್ರಚಾರಕ್ಕೆ ಆಯ್ದ ಸ್ಥಳಗಳಲ್ಲಿ ಸೈನ್ ಬೋರ್ಡ್ ಅಳವಡಿಕೆ

ಮೈಸೂರು ; ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಹಾಗೂ ಪ್ರವಾಸಿಗರನ್ನ ಆಕರ್ಷಿಸಲು ಮೈಸೂರು ನಗರ ಸೇರಿದಂತೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಪ್ರಚಾರಕ್ಕೆ ಡಿಜಿಟಲ್‌ ಸ್ಪರ್ಶ ನೀಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳೊಂದಿಗೆ ಹೆದ್ದಾರಿ ಸಂಪರ್ಕಿಸುವ ರಸ್ತೆಗಳಲ್ಲಿ ಡಿಜಿಟಲ್‌ ಸೈನ್‌ ಬೋರ್ಡ್‌ ಅಳವಡಿಸಲು ಚಿಂತನೆ ನಡೆಸಲಾಗಿದೆ. ಮೈಸೂರು ಅಂಬಾವಿಲಾಸ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ ಹೊರತಾಗಿ ಸಾಕಷ್ಟು ಪ್ರವಾಸಿ ತಾಣಗಳ ಬಗ್ಗೆ ಪ್ರವಾಸಿಗರಿಗೆ ಮಾಹಿತಿಯೇ ಇಲ್ಲ. ಹೀಗಾಗಿಯೇ ಕೆಲವೇ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೆ ಒಂದು ದಿನದಲ್ಲಿ ಭೇಟಿ ಕೊಟ್ಟು ಸಂಜೆಯೊಳಗೆ ಮೈಸೂರಿನಿಂದ ನಿರ್ಗಮಿಸುತ್ತಿದ್ದಾರೆ.

ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳು, ವಸ್ತು ಸಂಗ್ರಹಾಲಯಗಳು ಮೈಸೂರಿನಲ್ಲಿದ್ದರೂ ಕೂಡ ಪ್ರಚಾರದ ಕೊರತೆಯಿಂದಾಗಿ ಪ್ರವಾಸಿಗರು ಭೇಟಿ ಕೊಡುತ್ತಿಲ್ಲ. ಈಗಾಗಿ ಮೈಸೂರು ನಗರದಲ್ಲೆ ಇರುವ ಪ್ರವಾಸಿಗರ ದೃಷ್ಠಿಯಿಂದ ದೂರ ಉಳಿದ  ಸ್ಥಳಗಳ ಬಗ್ಗೆ ಸಮಗ್ರ ಮಾಹಿತಿ ಇರುವ ಕಿರು ಚಿತ್ರ ಸಿದ್ದಪಡಿಸಿ ಅವುಗಳನ್ನ ಬಳಸಿ ಪ್ರಚಾರ ಮಾಡಲು ಪ್ರವಾಸೋದ್ಯಮ ಇಲಾಖೆಯು ಯೋಜನೆ ರೂಪಿಸಿದೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

5 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

6 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

6 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

6 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

6 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

6 hours ago