ಮೈಸೂರು ; ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಹಾಗೂ ಪ್ರವಾಸಿಗರನ್ನ ಆಕರ್ಷಿಸಲು ಮೈಸೂರು ನಗರ ಸೇರಿದಂತೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಪ್ರಚಾರಕ್ಕೆ ಡಿಜಿಟಲ್ ಸ್ಪರ್ಶ ನೀಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.
ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳೊಂದಿಗೆ ಹೆದ್ದಾರಿ ಸಂಪರ್ಕಿಸುವ ರಸ್ತೆಗಳಲ್ಲಿ ಡಿಜಿಟಲ್ ಸೈನ್ ಬೋರ್ಡ್ ಅಳವಡಿಸಲು ಚಿಂತನೆ ನಡೆಸಲಾಗಿದೆ. ಮೈಸೂರು ಅಂಬಾವಿಲಾಸ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ ಹೊರತಾಗಿ ಸಾಕಷ್ಟು ಪ್ರವಾಸಿ ತಾಣಗಳ ಬಗ್ಗೆ ಪ್ರವಾಸಿಗರಿಗೆ ಮಾಹಿತಿಯೇ ಇಲ್ಲ. ಹೀಗಾಗಿಯೇ ಕೆಲವೇ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೆ ಒಂದು ದಿನದಲ್ಲಿ ಭೇಟಿ ಕೊಟ್ಟು ಸಂಜೆಯೊಳಗೆ ಮೈಸೂರಿನಿಂದ ನಿರ್ಗಮಿಸುತ್ತಿದ್ದಾರೆ.
ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳು, ವಸ್ತು ಸಂಗ್ರಹಾಲಯಗಳು ಮೈಸೂರಿನಲ್ಲಿದ್ದರೂ ಕೂಡ ಪ್ರಚಾರದ ಕೊರತೆಯಿಂದಾಗಿ ಪ್ರವಾಸಿಗರು ಭೇಟಿ ಕೊಡುತ್ತಿಲ್ಲ. ಈಗಾಗಿ ಮೈಸೂರು ನಗರದಲ್ಲೆ ಇರುವ ಪ್ರವಾಸಿಗರ ದೃಷ್ಠಿಯಿಂದ ದೂರ ಉಳಿದ ಸ್ಥಳಗಳ ಬಗ್ಗೆ ಸಮಗ್ರ ಮಾಹಿತಿ ಇರುವ ಕಿರು ಚಿತ್ರ ಸಿದ್ದಪಡಿಸಿ ಅವುಗಳನ್ನ ಬಳಸಿ ಪ್ರಚಾರ ಮಾಡಲು ಪ್ರವಾಸೋದ್ಯಮ ಇಲಾಖೆಯು ಯೋಜನೆ ರೂಪಿಸಿದೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…