ಮೈಸೂರು ; ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಲು ಹಾಗೂ ಪ್ರವಾಸಿಗರನ್ನ ಆಕರ್ಷಿಸಲು ಮೈಸೂರು ನಗರ ಸೇರಿದಂತೆ ಜಿಲ್ಲೆಯ ಪ್ರೇಕ್ಷಣೀಯ ಸ್ಥಳಗಳ ಪ್ರಚಾರಕ್ಕೆ ಡಿಜಿಟಲ್ ಸ್ಪರ್ಶ ನೀಡಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.
ನಗರದ ಪ್ರಮುಖ ರಸ್ತೆಗಳು ಮತ್ತು ವೃತ್ತಗಳೊಂದಿಗೆ ಹೆದ್ದಾರಿ ಸಂಪರ್ಕಿಸುವ ರಸ್ತೆಗಳಲ್ಲಿ ಡಿಜಿಟಲ್ ಸೈನ್ ಬೋರ್ಡ್ ಅಳವಡಿಸಲು ಚಿಂತನೆ ನಡೆಸಲಾಗಿದೆ. ಮೈಸೂರು ಅಂಬಾವಿಲಾಸ ಅರಮನೆ, ಮೃಗಾಲಯ, ಚಾಮುಂಡಿಬೆಟ್ಟ ಹೊರತಾಗಿ ಸಾಕಷ್ಟು ಪ್ರವಾಸಿ ತಾಣಗಳ ಬಗ್ಗೆ ಪ್ರವಾಸಿಗರಿಗೆ ಮಾಹಿತಿಯೇ ಇಲ್ಲ. ಹೀಗಾಗಿಯೇ ಕೆಲವೇ ಪ್ರಮುಖ ಪ್ರೇಕ್ಷಣೀಯ ಸ್ಥಳಗಳಿಗೆ ಒಂದು ದಿನದಲ್ಲಿ ಭೇಟಿ ಕೊಟ್ಟು ಸಂಜೆಯೊಳಗೆ ಮೈಸೂರಿನಿಂದ ನಿರ್ಗಮಿಸುತ್ತಿದ್ದಾರೆ.
ಸಾಕಷ್ಟು ಪ್ರೇಕ್ಷಣೀಯ ಸ್ಥಳಗಳು, ವಸ್ತು ಸಂಗ್ರಹಾಲಯಗಳು ಮೈಸೂರಿನಲ್ಲಿದ್ದರೂ ಕೂಡ ಪ್ರಚಾರದ ಕೊರತೆಯಿಂದಾಗಿ ಪ್ರವಾಸಿಗರು ಭೇಟಿ ಕೊಡುತ್ತಿಲ್ಲ. ಈಗಾಗಿ ಮೈಸೂರು ನಗರದಲ್ಲೆ ಇರುವ ಪ್ರವಾಸಿಗರ ದೃಷ್ಠಿಯಿಂದ ದೂರ ಉಳಿದ ಸ್ಥಳಗಳ ಬಗ್ಗೆ ಸಮಗ್ರ ಮಾಹಿತಿ ಇರುವ ಕಿರು ಚಿತ್ರ ಸಿದ್ದಪಡಿಸಿ ಅವುಗಳನ್ನ ಬಳಸಿ ಪ್ರಚಾರ ಮಾಡಲು ಪ್ರವಾಸೋದ್ಯಮ ಇಲಾಖೆಯು ಯೋಜನೆ ರೂಪಿಸಿದೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…