Mysuru | Farmers Protest Condemning Police Atrocity Against Them
ಮೈಸೂರು: ದೇವನಹಳ್ಳಿಯ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ದಬ್ಬಾಳಿಕೆ ನಡೆಸಿ ಹಲವು ರೈತರನ್ನು ಬಂಧಿಸಿರುವ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು ರೈತರು ಪ್ರತಿಭಟನೆ ನಡೆಸಿದರು.
ಕೈಗಾರಿಕಾಭಿವೃದ್ಧಿಗೆ ಬಲವಂತ ಭೂಸ್ವಾಧೀನ ವಿರುದ್ಧ ಸುಮಾರು 1177 ದಿನಗಳಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ನಿನ್ನೆ ಪ್ರತಿಭಟನಾ ನಿರತರನ್ನು ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರ ನಡೆಯನ್ನು ಖಂಡಿಸಿ ಮೈಸೂರಿನಲ್ಲಿಂದು ರೈತರು ಪ್ರತಿಭಟನೆ ನಡೆಸಿದರು.
ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಜಮಾಯಿಸಿದ ವಿವಿಧ ರೈತ ಪರ ಸಂಘಟನೆಗಳ ಮುಖಂಡರು ರಾಜ್ಯ ಸರ್ಕಾರ ಹಾಗೂ ಪೊಲೀಸರ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಸರ್ಕಾರ ಭೂಸ್ವಾಧೀನ ಆದೇಶ ಹಿಂಪಡೆಯಬೇಕು ಎಂದು ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಯುತ್ತಿದೆ. ಆದರೂ ಈ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳುತ್ತಿಲ್ಲ. ಕೂಡಲೇ ಸರ್ಕಾರ ಭೂಸ್ವಾಧೀನ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಜೀಪ್ ವ್ಯವಸ್ಥೆ ಮಾಡುವಂತೆ ತಹಸಿಲ್ದಾರ್ಗೆ ಮನವಿ ಮಾಡಿದ ಬಿಇಒ ಹನೂರು: ಹನೂರು ಶೈಕ್ಷಣಿಕ ವಲಯದ ಪಚ್ಚೆದೊಡ್ಡಿ ಗ್ರಾಮದ ಶಾಲೆಗೆ ಕ್ಷೇತ್ರ…
ಮಂಜು ಕೋಟೆ ಪ್ರತಿನಿತ್ಯ ಅಧಿಕಾರಿಗಳ ಬಳಿ ಅಲೆದಾಡುತ್ತಿರುವ ನೌಕರರು; ಕುಟುಂಬ ನಿರ್ವಹಣೆಗೆ ಪರದಾಟ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಪೌರಕಾರ್ಮಿಕರು ಮತ್ತು…
ಪುಸ್ತಕ ಪ್ರಿಯರಿಗಾಗಿ ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ ಮೈಸೂರು: ವಿಶ್ವಕೋಶ, ಶಬ್ಧಕೋಶ, ಇಂಗ್ಲಿಷ್-ಕನ್ನಡ ನಿಘಂಟು, ಕನ್ನಡ-ಇಂಗ್ಲಿಷ್ ನಿಘಂಟು, ಕನ್ನಡ ಗ್ರಂಥಮಾಲೆ,…
ಕೆ.ಬಿ.ರಮೇಶನಾಯಕ ಅಕ್ಟೋಬರ್ ತಿಂಗಳ ಅಂತ್ಯಕ್ಕೆ ಶೇ.೮೨.೯೭ರಷ್ಟು ತೆರಿಗೆ ಸಂಗ್ರಹ ಮೈಸೂರು: ಗುತ್ತಿಗೆದಾರರಿಗೆ ಹಣ ಪಾವತಿಸಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮೈಸೂರು…
ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…