ಮೈಸೂರು ನಗರ

ಮೈಸೂರು: ಹೈಟೆಕ್‌ ಬಸ್‌ ನಿರ್ಮಾಣಕ್ಕೆ ಅಸ್ತು ಎಂದ ಸರ್ಕಾರ

ಮೈಸೂರು: ಸುಮಾರು 127 ಕೋಟಿ ರೂ ವೆಚ್ಚದಲ್ಲಿ ನಗರದ ಬನ್ನಿ ಮಂಟಪದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಸಬರ್ಬನ್‌ ನಿಲ್ದಾಣದಲ್ಲಿ ಪ್ರತಿನಿತ್ಯ 2700ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ. ಸ್ಥಳಾವಕಾಶದ ಕೊರತೆಯಿಂದಾಗಿ ಹೆಚ್ಚುವರಿ ಬಸ್‌ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ.

ನಗರದ ಮಧ್ಯ ಭಾಗದಲ್ಲಿರುವ ಸಬರ್ಬನ್‌ ಬಸ್‌ ನಿಲ್ದಾಣವನ್ನು ಯಾವುದೇ ಕಾರಣಕ್ಕೂ ಸಂಪೂರ್ಣವಾಗಿ ಸ್ಥಳಾಂತರ ಮಾಡುವುದಿಲ್ಲ. ಅಂತರ್‌ ರಾಜ್ಯ ಬಸ್‌ಗಳನ್ನು ಮಾತ್ರ ಅಲ್ಲಿಂದ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಭಾಗದ ಎಲ್ಲಾ ಬಸ್‌ಗಳ ಸಂಚಾರ ಇಲ್ಲೇ ಆಗುತ್ತದೆ ಎಂದು ಮೈಸೂರು ಗ್ರಾಮಾಂತರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿ ಶ್ರೀನಿವಾಸ್‌ ತಿಳಿಸಿದ್ದಾರೆ.

ಬನ್ನಿಮಂಟಪದ 64 ಎಕರೆ ಪ್ರದೇಶದಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ 14 ಎಕರೆ ಪ್ರದೇಶದಲ್ಲಿ ಬಸ್‌ ನಿಲ್ದಾಣ ನಿರ್ಮಿಸಲಾಗುತ್ತದೆ. ಸರ್ಕಾರದಿಂದ ಅನುದಾನ ಬಿಡುಗಡೆ ಆದ ತಕ್ಷಣ ಕೆಲಸ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಬಸ್‌ ನಿಲ್ದಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ. ಏಪ್ರಿಲ್‌ ತಿಂಗಳಲ್ಲಿ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದ್ದು, ಇನ್ನು ಎರಡು ವರ್ಷಗಳಲ್ಲಿ ಹೊಸ ಬಸ್‌ ನಿಲ್ದಾಣ ನಿರ್ಮಾಣ ಆಗಲಿದೆ ಎಂದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು…

12 mins ago

ಉದ್ಯಮಿ ಸಿ.ಜೆ.ರಾಯ್‌ ಸಾವಿನ ಬಗ್ಗೆ ಸಚಿವ ಪರಮೇಶ್ವರ್‌ ಮಾಹಿತಿ

ಬೆಂಗಳೂರು: ರಿಯಲ್‌ ಎಸ್ಟೇಟ್‌ ಉದ್ಯಮಿ, ಕಾನ್ಪಿಡೆಂಟ್‌ ಗ್ರೂಪ್‌ ಚೇರ್ಮನ್‌ ಸಿ.ಜೆ.ರಾಯ್‌ ಆತ್ಮಹತ್ಯೆ ಪ್ರಕರಣದ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ…

48 mins ago

ನಾಳೆ ಕೇಂದ್ರ ಬಜೆಟ್‌ ಮಂಡನೆ ಮಂಡನೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ನಾಳೆ 9ನೇ ಬಾರಿಗೆ ಬಜೆಟ್‌ ಮಂಡನೆ ಮಾಡಲಿದ್ದಾರೆ. ಈ ಮೂಲಕ…

1 hour ago

ಬನ್ನೇರುಘಟ್ಟದ ಕಾಸಾಗ್ರ್ಯಾಂಡ್‌ನಲ್ಲಿ ಇಂದು ಸಂಜೆ ಉದ್ಯಮಿ ಸಿ.ಜೆ.ರಾಯ್ ಅಂತ್ಯಕ್ರಿಯೆ

ಬೆಂಗಳೂರು: ಖ್ಯಾತ ಉದ್ಯಮಿ ಮತ್ತು ಕಾನ್ಪಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಹಾಗೂ ಅಧ್ಯಕ್ಷರಾಗಿದ್ದ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು,…

2 hours ago

ಓದುಗರ ಪತ್ರ: ಮೈಸೂರಿನಲ್ಲಿ ಮಳೆ ನೀರು ಕೊಯ್ಲು ಥೀಮ್ ಪಾರ್ಕ್ ಕನ್ನಡಿಯೊಳಗಿನ ಗಂಟು

ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…

5 hours ago

ಓದುಗರ ಪತ್ರ: ಅಂಕೇಗೌಡರಿಗೆ ಸಿಕ್ಕ ಪದ್ಮಶ್ರೀ ಸಾರಸ್ವತ ಲೋಕಕ್ಕೆ ಸಂದ ಗೌರವ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…

5 hours ago