ಮೈಸೂರು ನಗರ

ಮೈಸೂರು: ಹೈಟೆಕ್‌ ಬಸ್‌ ನಿರ್ಮಾಣಕ್ಕೆ ಅಸ್ತು ಎಂದ ಸರ್ಕಾರ

ಮೈಸೂರು: ಸುಮಾರು 127 ಕೋಟಿ ರೂ ವೆಚ್ಚದಲ್ಲಿ ನಗರದ ಬನ್ನಿ ಮಂಟಪದಲ್ಲಿ ಹೈಟೆಕ್‌ ಬಸ್‌ ನಿಲ್ದಾಣ ಮಾಡುವುದಕ್ಕೆ ರಾಜ್ಯ ಸರ್ಕಾರ ಅಸ್ತು ಎಂದಿದೆ.

ಸಬರ್ಬನ್‌ ನಿಲ್ದಾಣದಲ್ಲಿ ಪ್ರತಿನಿತ್ಯ 2700ಕ್ಕೂ ಹೆಚ್ಚು ಬಸ್‌ಗಳು ಸಂಚರಿಸುತ್ತವೆ. ಸ್ಥಳಾವಕಾಶದ ಕೊರತೆಯಿಂದಾಗಿ ಹೆಚ್ಚುವರಿ ಬಸ್‌ ನಿಲ್ದಾಣಕ್ಕೆ ಸರ್ಕಾರ ಮುಂದಾಗಿದೆ.

ನಗರದ ಮಧ್ಯ ಭಾಗದಲ್ಲಿರುವ ಸಬರ್ಬನ್‌ ಬಸ್‌ ನಿಲ್ದಾಣವನ್ನು ಯಾವುದೇ ಕಾರಣಕ್ಕೂ ಸಂಪೂರ್ಣವಾಗಿ ಸ್ಥಳಾಂತರ ಮಾಡುವುದಿಲ್ಲ. ಅಂತರ್‌ ರಾಜ್ಯ ಬಸ್‌ಗಳನ್ನು ಮಾತ್ರ ಅಲ್ಲಿಂದ ಕಾರ್ಯಾಚರಣೆ ಮಾಡಲಾಗುತ್ತದೆ. ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಭಾಗದ ಎಲ್ಲಾ ಬಸ್‌ಗಳ ಸಂಚಾರ ಇಲ್ಲೇ ಆಗುತ್ತದೆ ಎಂದು ಮೈಸೂರು ಗ್ರಾಮಾಂತರ ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣ ಅಧಿಕಾರಿ ಶ್ರೀನಿವಾಸ್‌ ತಿಳಿಸಿದ್ದಾರೆ.

ಬನ್ನಿಮಂಟಪದ 64 ಎಕರೆ ಪ್ರದೇಶದಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಂತೆ 14 ಎಕರೆ ಪ್ರದೇಶದಲ್ಲಿ ಬಸ್‌ ನಿಲ್ದಾಣ ನಿರ್ಮಿಸಲಾಗುತ್ತದೆ. ಸರ್ಕಾರದಿಂದ ಅನುದಾನ ಬಿಡುಗಡೆ ಆದ ತಕ್ಷಣ ಕೆಲಸ ಆರಂಭವಾಗಲಿದೆ ಎಂದು ಮಾಹಿತಿ ನೀಡಿದರು.

ಬಸ್‌ ನಿಲ್ದಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದೆ. ಏಪ್ರಿಲ್‌ ತಿಂಗಳಲ್ಲಿ ಕಾಮಗಾರಿ ಆರಂಭವಾಗುವ ಸಾಧ್ಯತೆ ಇದ್ದು, ಇನ್ನು ಎರಡು ವರ್ಷಗಳಲ್ಲಿ ಹೊಸ ಬಸ್‌ ನಿಲ್ದಾಣ ನಿರ್ಮಾಣ ಆಗಲಿದೆ ಎಂದಿದ್ದಾರೆ.

 

ಆಂದೋಲನ ಡೆಸ್ಕ್

Recent Posts

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

9 mins ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

41 mins ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

56 mins ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

1 hour ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

1 hour ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

2 hours ago