ಮೈಸೂರು ನಗರ

ಮೈಸೂರು | ಕ್ರಿಕೆಟ್‌ ಆಡಿ ಖುಷಿಪಟ್ಟ ಪತ್ರಕರ್ತರು

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ದೊರೆಯಿತು.

ನಗರದ ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಮೈಸೂರು ವಲಯದ ಸಂಯೋಜಕ ಆರ್.ಕೆ.ಹರಿಕೃಷ್ಣಕುಮಾರ್ ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಮನೋವಿಕಾಸ ಮತ್ತು ಬುದ್ದಿ ಚುರುಕುಗೊಳ್ಳಲು ಕ್ರೀಡೆ ಪ್ರತಿಯೊಬ್ಬರಿಗೂ ಅಗತ್ಯ. ಹಾಗೆಯೇ ದೈಹಿಕ, ಮಾನಸಿಕ ಆರೋಗ್ಯಕ್ಕೂ ಸಹಕಾರಿಯಾಗಿದೆ. ಕೆಲಸದ ಒತ್ತಡದ ನಡುವೆಯೂ ಪತ್ರಕರ್ತರು ಒಂದೆಡೆ ಸೇರಿ ಕ್ರೀಡೆಯಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಮೈಸೂರು ವಲಯದ ಸಂಯೋಜಕ ಆರ್.ಕೆ.ಹರಿಕೃಷ್ಣ ಕುಮಾರ್ ಮಾತನಾಡಿ, ಸಮಾಜದಲ್ಲಿ ವೈದ್ಯರಷ್ಟೇ ಪತ್ರಕರ್ತರ ಪಾತ್ರವು ಅತ್ಯಂತ ಅಗತ್ಯವಾದದ್ದು. ಪತ್ರ ಕರ್ತರು ದಿನನಿತ್ಯದ ಒತ್ತಡದ ಬದುಕಿನಲ್ಲಿ ಇಂತಹದೊಂದು ಕ್ರೀಡಾಕೂಟ ಅತ್ಯಂತ ಅವಶ್ಯವಾಗಿದೆ. ಕ್ರೀಡೆ ಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವುದು ಮುಖ್ಯ ಎಂದು ತಿಳಿಸಿದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿ, ಮೈಸೂರು ಪತ್ರಿಕೋದ್ಯಮಕ್ಕೆ ಕೆಬಿಜಿ ಮತ್ತು ಕೋಟಿ ಅವರು ಎರಡು ಕಣ್ಣುಗಳಿದ್ದಂತೆ. ಕೆಬಿಜಿ ಅವರಿಗೆ ಕ್ರೀಡೆಯ ಬಗ್ಗೆ ಸಾಕಷ್ಟು ಒಲವಿತ್ತು. ಅವರ ಅಗಲಿಕೆಯ ಸ್ಮರಣಾರ್ಥ ಹಿನ್ನೆಲೆಯಲ್ಲಿ ಈ ಬಾರಿಯ ಕ್ರೀಡಾಕೂಟದಲ್ಲಿ ನಡೆಯುತ್ತಿರುವ ಕ್ರಿಕೆಟ್ ಕಪ್‌ಗೆ ‘ಕೆಬಿಜಿ ಕಪ್’ ಎಂದು ಹೆಸರಿಡಲಾಗಿದೆ. ಈ ಮೂಲಕ ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.

ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಸಿ.ವೆಂಕಟೇಶ್, ಮಹಾರಾಣಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಡಾ.ಭಾಸ್ಕರ್, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ, ಹನಗೂಡು ವೆಂಕಟಪ್ಪ, ಕೃಷ್ಣಾಜೀ ರಾವ್, ರವಿ ಪಾಂಡವಪುರ, ಖಜಾಂಚಿ ಸುರೇಶ್, ಪ್ರಗತಿ ಗೋಪಾಲ್‌ಕೃಷ್ಣ, ದ.ರಾ.ಮಹೇಶ್, ಹನಗೂಡು ನಟರಾಜ್, ಶಿವಣ್ಣ, ರಾಜಣ್ಣ, ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

9 mins ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

19 mins ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

26 mins ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

1 hour ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

2 hours ago

ಮೈಸೂರಿನ ಕುವೆಂಪು ಮನೆ ಇನ್ಮುಂದೆ ಸ್ಮಾರಕ : ಸರ್ಕಾರದ ಘೋಷಣೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ನಿವಾಸವನ್ನು ಸ್ಮಾರಕ ಮತ್ತು ಮ್ಯೂಸಿಯಂ ಮಾಡಲು ಸರ್ಕಾರ…

3 hours ago