ಮೈಸೂರು ನಗರ

ಮೈಸೂರು | ಕ್ರಿಕೆಟ್‌ ಆಡಿ ಖುಷಿಪಟ್ಟ ಪತ್ರಕರ್ತರು

ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ದೊರೆಯಿತು.

ನಗರದ ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಮೈಸೂರು ವಲಯದ ಸಂಯೋಜಕ ಆರ್.ಕೆ.ಹರಿಕೃಷ್ಣಕುಮಾರ್ ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಮನೋವಿಕಾಸ ಮತ್ತು ಬುದ್ದಿ ಚುರುಕುಗೊಳ್ಳಲು ಕ್ರೀಡೆ ಪ್ರತಿಯೊಬ್ಬರಿಗೂ ಅಗತ್ಯ. ಹಾಗೆಯೇ ದೈಹಿಕ, ಮಾನಸಿಕ ಆರೋಗ್ಯಕ್ಕೂ ಸಹಕಾರಿಯಾಗಿದೆ. ಕೆಲಸದ ಒತ್ತಡದ ನಡುವೆಯೂ ಪತ್ರಕರ್ತರು ಒಂದೆಡೆ ಸೇರಿ ಕ್ರೀಡೆಯಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಮೈಸೂರು ವಲಯದ ಸಂಯೋಜಕ ಆರ್.ಕೆ.ಹರಿಕೃಷ್ಣ ಕುಮಾರ್ ಮಾತನಾಡಿ, ಸಮಾಜದಲ್ಲಿ ವೈದ್ಯರಷ್ಟೇ ಪತ್ರಕರ್ತರ ಪಾತ್ರವು ಅತ್ಯಂತ ಅಗತ್ಯವಾದದ್ದು. ಪತ್ರ ಕರ್ತರು ದಿನನಿತ್ಯದ ಒತ್ತಡದ ಬದುಕಿನಲ್ಲಿ ಇಂತಹದೊಂದು ಕ್ರೀಡಾಕೂಟ ಅತ್ಯಂತ ಅವಶ್ಯವಾಗಿದೆ. ಕ್ರೀಡೆ ಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವುದು ಮುಖ್ಯ ಎಂದು ತಿಳಿಸಿದರು.

ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿ, ಮೈಸೂರು ಪತ್ರಿಕೋದ್ಯಮಕ್ಕೆ ಕೆಬಿಜಿ ಮತ್ತು ಕೋಟಿ ಅವರು ಎರಡು ಕಣ್ಣುಗಳಿದ್ದಂತೆ. ಕೆಬಿಜಿ ಅವರಿಗೆ ಕ್ರೀಡೆಯ ಬಗ್ಗೆ ಸಾಕಷ್ಟು ಒಲವಿತ್ತು. ಅವರ ಅಗಲಿಕೆಯ ಸ್ಮರಣಾರ್ಥ ಹಿನ್ನೆಲೆಯಲ್ಲಿ ಈ ಬಾರಿಯ ಕ್ರೀಡಾಕೂಟದಲ್ಲಿ ನಡೆಯುತ್ತಿರುವ ಕ್ರಿಕೆಟ್ ಕಪ್‌ಗೆ ‘ಕೆಬಿಜಿ ಕಪ್’ ಎಂದು ಹೆಸರಿಡಲಾಗಿದೆ. ಈ ಮೂಲಕ ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.

ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಸಿ.ವೆಂಕಟೇಶ್, ಮಹಾರಾಣಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಡಾ.ಭಾಸ್ಕರ್, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ, ಹನಗೂಡು ವೆಂಕಟಪ್ಪ, ಕೃಷ್ಣಾಜೀ ರಾವ್, ರವಿ ಪಾಂಡವಪುರ, ಖಜಾಂಚಿ ಸುರೇಶ್, ಪ್ರಗತಿ ಗೋಪಾಲ್‌ಕೃಷ್ಣ, ದ.ರಾ.ಮಹೇಶ್, ಹನಗೂಡು ನಟರಾಜ್, ಶಿವಣ್ಣ, ರಾಜಣ್ಣ, ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಶೆಡ್‌, 4ಸಾವಿರ ಕೋಳಿ ಬೆಂಕಿಗಾಹುತಿ ; 25 ಲಕ್ಷ ನಷ್ಟ

ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4…

6 hours ago

ಸಿಎನ್‌ಜಿ ಸಮಸ್ಯೆ ಇಲ್ಲ : ಸಚಿವ ಮುನಿಯಪ್ಪ

ದಾವಣಗೆರೆ : ಆಟೋ ರಿಕ್ಷಾಗಳಿಗೆ ಅನಿಲ ಪೂರೈಕೆ ಸಮಸ್ಯೆ ಇಲ್ಲ, ಆದರೂ ವಿನಾಕಾರಣ ಆತಂಕಕ್ಕೊಳಗಾಗಿ ಕ್ಯೂ ನಿಲ್ಲಲಾಗುತ್ತಿದೆ ಎಂದು ಆಹಾರ…

7 hours ago

ಬಲಮುರಿ ಕಾವೇರಿ ನದಿಯಲ್ಲಿ ಮುಳುಗಿ ಯುವಕ ಸಾವು

ಶ್ರೀರಂಗಪಟ್ಟಣ : ಪ್ರವಾಸಕ್ಕೆ ಬಂದಿದ್ದ ಇನ್ಫೋಸಿಸ್ ಉದ್ಯೋಗಿಯೊಬ್ಬರು ಕಾವೇರಿ ನದಿಯಲ್ಲಿ ಈಜಲು ಹೋಗಿ ಮುಳುಗಿ ಸಾವನ್ನಪ್ಪಿದ ಘಟನೆ ಶ್ರೀರಂಗಪಟ್ಟಣ ತಾಲೂಕಿನ…

7 hours ago

ದಿನಗೂಲಿ ನೌಕರರಿಗೂ ಆರೋಗ್ಯ ವಿಮಾ ಸೌಲಭ್ಯ

ಬೆಂಗಳೂರು : ಕರ್ನಾಟಕ ಸರ್ಕಾರವು ದಿನಗೂಲಿ ನೌಕರರು ಮತ್ತು ಅವರ ಅವಲಂಬಿತರಿಗೆ ವಾರ್ಷಿಕ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ…

7 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅಸ್ತು

ಬೆಂಗಳೂರು : ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿ ಹಗರಣ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್…

7 hours ago

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ…

7 hours ago