Mysuru | Journalists enjoy playing cricket
ಮೈಸೂರು: ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿರುವ ಎರಡು ದಿನಗಳ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟಕ್ಕೆ ಶನಿವಾರ ಚಾಲನೆ ದೊರೆಯಿತು.
ನಗರದ ಮೈಸೂರು ವಿಶ್ವವಿದ್ಯಾನಿಲಯದ ಓವೆಲ್ ಮೈದಾನದಲ್ಲಿ ನಡೆದ ಕ್ರೀಡಾಕೂಟಕ್ಕೆ ಮೈಸೂರು ವಿವಿ ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ಮೈಸೂರು ವಲಯದ ಸಂಯೋಜಕ ಆರ್.ಕೆ.ಹರಿಕೃಷ್ಣಕುಮಾರ್ ಬಲೂನ್ ಹಾರಿ ಬಿಡುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಮನೋವಿಕಾಸ ಮತ್ತು ಬುದ್ದಿ ಚುರುಕುಗೊಳ್ಳಲು ಕ್ರೀಡೆ ಪ್ರತಿಯೊಬ್ಬರಿಗೂ ಅಗತ್ಯ. ಹಾಗೆಯೇ ದೈಹಿಕ, ಮಾನಸಿಕ ಆರೋಗ್ಯಕ್ಕೂ ಸಹಕಾರಿಯಾಗಿದೆ. ಕೆಲಸದ ಒತ್ತಡದ ನಡುವೆಯೂ ಪತ್ರಕರ್ತರು ಒಂದೆಡೆ ಸೇರಿ ಕ್ರೀಡೆಯಲ್ಲಿ ಪಾಲ್ಗೊಂಡಿರುವುದು ಸಂತಸದ ಸಂಗತಿಯಾಗಿದೆ ಎಂದರು.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ ಮೈಸೂರು ವಲಯದ ಸಂಯೋಜಕ ಆರ್.ಕೆ.ಹರಿಕೃಷ್ಣ ಕುಮಾರ್ ಮಾತನಾಡಿ, ಸಮಾಜದಲ್ಲಿ ವೈದ್ಯರಷ್ಟೇ ಪತ್ರಕರ್ತರ ಪಾತ್ರವು ಅತ್ಯಂತ ಅಗತ್ಯವಾದದ್ದು. ಪತ್ರ ಕರ್ತರು ದಿನನಿತ್ಯದ ಒತ್ತಡದ ಬದುಕಿನಲ್ಲಿ ಇಂತಹದೊಂದು ಕ್ರೀಡಾಕೂಟ ಅತ್ಯಂತ ಅವಶ್ಯವಾಗಿದೆ. ಕ್ರೀಡೆ ಗಳಲ್ಲಿ ಸೋಲು ಗೆಲುವಿಗಿಂತ ಭಾಗವಹಿಸುವುದು ಮುಖ್ಯ ಎಂದು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ದೀಪಕ್ ಮಾತನಾಡಿ, ಮೈಸೂರು ಪತ್ರಿಕೋದ್ಯಮಕ್ಕೆ ಕೆಬಿಜಿ ಮತ್ತು ಕೋಟಿ ಅವರು ಎರಡು ಕಣ್ಣುಗಳಿದ್ದಂತೆ. ಕೆಬಿಜಿ ಅವರಿಗೆ ಕ್ರೀಡೆಯ ಬಗ್ಗೆ ಸಾಕಷ್ಟು ಒಲವಿತ್ತು. ಅವರ ಅಗಲಿಕೆಯ ಸ್ಮರಣಾರ್ಥ ಹಿನ್ನೆಲೆಯಲ್ಲಿ ಈ ಬಾರಿಯ ಕ್ರೀಡಾಕೂಟದಲ್ಲಿ ನಡೆಯುತ್ತಿರುವ ಕ್ರಿಕೆಟ್ ಕಪ್ಗೆ ‘ಕೆಬಿಜಿ ಕಪ್’ ಎಂದು ಹೆಸರಿಡಲಾಗಿದೆ. ಈ ಮೂಲಕ ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ ಎಂದರು.
ಮೈಸೂರು ವಿವಿ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ಡಾ.ಸಿ.ವೆಂಕಟೇಶ್, ಮಹಾರಾಣಿ ಪ್ರಥಮ ದರ್ಜೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಡಾ.ಭಾಸ್ಕರ್, ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್, ರಾಜ್ಯ ಸಮಿತಿ ಸದಸ್ಯ ರಾಘವೇಂದ್ರ, ಹನಗೂಡು ವೆಂಕಟಪ್ಪ, ಕೃಷ್ಣಾಜೀ ರಾವ್, ರವಿ ಪಾಂಡವಪುರ, ಖಜಾಂಚಿ ಸುರೇಶ್, ಪ್ರಗತಿ ಗೋಪಾಲ್ಕೃಷ್ಣ, ದ.ರಾ.ಮಹೇಶ್, ಹನಗೂಡು ನಟರಾಜ್, ಶಿವಣ್ಣ, ರಾಜಣ್ಣ, ಎಲ್ಲಾ ತಾಲ್ಲೂಕುಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…