ಮೈಸೂರು ನಗರ

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು ಕರಗ ಮಹೋತ್ಸವ ಕೂಡ ಒಂದು. ಬೆಂಗಳೂರಿನ ಕರಗದಂತೆಯೇ ರಾಜ್ಯಾದ್ಯಂತ ಖ್ಯಾತಿ ಪಡೆದಿರುವ ಈ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹೋತ್ಸವಕ್ಕೆ, ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ಮಾರಮ್ಮ ದೇವಸ್ಥಾನದಲ್ಲಿ ಚಾಲನೆ ದೊರೆಯಿತು.

೫ನೇ ದಿನ ಇತಿಹಾಸ ಪ್ರಸಿದ್ಧವಾದ ೧೦೨ನೇ ವರ್ಷದ ಮೈಸೂರಿನ ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆ ಶನಿವಾರ ರಾತ್ರಿ ದೇವಸ್ಥಾನದಿಂದ ಹೊರಟ ಕರಗವು ನಗರದ ಪ್ಯಾಲೆಸ್ ಆಫೀಸ್ ರಸ್ತೆ, ನೂರಡಿ ರಸ್ತೆ, ನಾರಾಯಣ ಶಾಸ್ತ್ರಿ ರಸ್ತೆ, ನಲ್ಲಪ್ಪ ಠಾಣಾ ರಸ್ತೆ, ಶಿವರಾಂಪೇಟೆ, ಸಯ್ಯಾಜಿರಾವ್ ರಸ್ತೆ, ಮಿಷನ್ ಆಸ್ಪತ್ರೆ ರಸ್ತೆ, ಕಬೀರ್ ರಸ್ತೆ, ಕಾಳಮ್ಮ ಗುಡಿ ರಸ್ತೆ, ಇರ್ವಿನ್ ರಸ್ತೆ, ಕುರುಬಗೇರಿ, ಕುಂಬಾರಗೇರಿ, ಅಶೋಕ ರಸ್ತೆ, ನಜರಬಾದ್‌, ಮೃಗಾಲಯ ರಸ್ತೆ ಮಾರ್ಗವಾಗಿ ಸಾಗಿ ಭಾನುವಾರ (ಏ.೨೬ರಂದು) ಬೆಳಗ್ಗೆ ದೇವಸ್ಥಾನಕ್ಕೆ ಹಿಂತಿರುಗಿತು.

ಕರಗ ಮಹೋತ್ಸವ ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸಿತು. ಮೆರವಣಿಗೆಗೆ ವೀರಗಾಸೆ, ಕಂಸಾಳೆ, ಡೊಳ್ಳು, ತಮಟೆ, ಗಾರುಡಿ ಗೊಂಬೆ, ನಾದಸ್ವರ ಸೇರಿದಂತೆ ವಿವಿಧ ಕಲಾ ತಂಡಗಳು ಮೆರುಗು ನೀಡಿದವು.

ಮಹತ್ವ
ಮೈಸೂರು ಕರಗ ಮಹೋತ್ಸವವು ಕೇವಲ ಧಾರ್ಮಿಕ ಕಾರ್ಯಕ್ರಮವಷ್ಟೇ ಅಲ್ಲ, ಇದು ಸಾಂಸ್ಕೃತಿಕ ಮತ್ತು ಸಾವಾಜಿಕ ಸೌಹಾರ್ದತೆಯ ಸಂಕೇತವಾಗಿದೆ. ಈ ಉತ್ಸವವು ಸ್ಥಳೀಯ ಜನರನ್ನು ಒಗ್ಗೂಡಿಸುವುದರ ಜತೆಗೆ, ಪರಂಪರೆಯನ್ನು ಉಳಿಸಿ-ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕರಗದ ಸಂದರ್ಭದಲ್ಲಿ ಸಾಂಪ್ರದಾಯಿಕ ಕಲೆಗಳು, ನೃತ್ಯ, ಸಂಗೀತ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತವೆ. ಇದು ಯು ಜನಾಂಗಕ್ಕೆ ತಮ್ಮ ಸಂಸ್ಕೃತಿಯ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಒದಗಿಸುತ್ತದೆ.

ಅನ್ನ ಸಂತರ್ಪಣೆ
ಕರಗ ಮಹೋತ್ಸವದ ಅಂಗವಾಗಿ ಶನಿವಾರ ಅನ್ನ ಸಂತರ್ಪಣೆ ನಡೆಯಿತು. ಸುಮಾರು ೧೦ ಸಾವಿರ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದರು ಎಂದು ಮುನೇಶ್ವರ ಸ್ವಾಮಿ ದೇವಸ್ಥಾನದ ಆರ್ಚಕರಾದ ಕಾರ್ತೀಕ್ ತಿಳಿಸಿದರು.

ಕರಗದಲ್ಲಿ ಇಂದು
ಭಾನುವಾರ ಮಧ್ಯಾಹ್ನ ೧೨ ಗಂಟೆಗೆ ಅಂಬಲಿ ಪೂಜೆ ನಡೆಯುತ್ತದೆ. ನಂತರ ಆರಿಶಿನ ನೀರಿನ ಓಕುಳಿ ಆಡಲು ಕರಗವು ದೇವಸ್ಥಾನದಿಂದ ಹೊರಡುವುದು. ನಂತರ ೪ ಗಂಟೆಯಿಂದ ಭಕ್ತಾದಿಗಳಿಂದ ತಂಬಿಟ್ಟು ಆರತಿ ನೆರವೇರಲಿದೆ. ರಾತ್ರಿ ೭ ಗಂಟೆಗೆ ಕರಗವು ದೇವಸ್ಥಾನದಿಂದ ಹೊರಟು ಇಟ್ಟಿಗೆಗೂಡಿನ ಎಲ್ಲಾ ಬೀದಿಗಳಲ್ಲಿ ಆರತಿ ಪೂಜೆ ಸ್ವೀಕರಿಸಿ ದೇವಸ್ಥಾನ ತಲುಪುವುದು. ರಾತ್ರಿ ೧೨ ಗಂಟೆಗೆ ನೈವೇದ್ಯದೊಂದಿಗೆ ಮಹಾಮಂಗಳಾರತಿ ನೆರವೇರಲಿದೆ. ದಿ.೨೭ರ ಸೋಮವಾರದಂದು ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ಪಶ್ವಿಮವಾಹಿನಿಯಲ್ಲಿ ಕರಗವನ್ನು ವಿಸರ್ಜಿಸಲಾಗುವುದು.

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

16 mins ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 mins ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

24 mins ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

28 mins ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

33 mins ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

37 mins ago