ಮೈಸೂರು ನಗರ

ಮೈಸೂರು ಕರಗ ; ಅದ್ದೂರಿ ಮೆರವಣಿಗೆ

ಮೈಸೂರು : ನಗರದಲ್ಲಿ ಮಿನಿ ದಸರಾ ಎಂದೇ ಪ್ರಸಿದ್ಧಿ ಪಡೆದಿರುವ, ಸಾಂಸ್ಕೃತಿಕ ನಗರಿ ಮೈಸೂರಿನ ಮೆರುಗು ಹೆಚ್ಚಿಸಿರುವ ಆಚರಣೆಗಳಲ್ಲಿ ಮೈಸೂರು ಕರಗ ಮಹೋತ್ಸವ ಕೂಡ ಒಂದು. ಬೆಂಗಳೂರಿನ ಕರಗದಂತೆಯೇ ರಾಜ್ಯಾದ್ಯಂತ ಖ್ಯಾತಿ ಪಡೆದಿರುವ ಈ ಸಾಂಸ್ಕೃತಿಕ ಮತ್ತು ಧಾರ್ಮಿಕ ಮಹೋತ್ಸವಕ್ಕೆ, ಮೈಸೂರಿನ ಇಟ್ಟಿಗೆಗೂಡಿನಲ್ಲಿರುವ ಮಾರಮ್ಮ ದೇವಸ್ಥಾನದಲ್ಲಿ ಚಾಲನೆ ದೊರೆಯಿತು.

೫ನೇ ದಿನ ಇತಿಹಾಸ ಪ್ರಸಿದ್ಧವಾದ ೧೦೨ನೇ ವರ್ಷದ ಮೈಸೂರಿನ ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆ ಶನಿವಾರ ರಾತ್ರಿ ದೇವಸ್ಥಾನದಿಂದ ಹೊರಟ ಕರಗವು ನಗರದ ಪ್ಯಾಲೆಸ್ ಆಫೀಸ್ ರಸ್ತೆ, ನೂರಡಿ ರಸ್ತೆ, ನಾರಾಯಣ ಶಾಸ್ತ್ರಿ ರಸ್ತೆ, ನಲ್ಲಪ್ಪ ಠಾಣಾ ರಸ್ತೆ, ಶಿವರಾಂಪೇಟೆ, ಸಯ್ಯಾಜಿರಾವ್ ರಸ್ತೆ, ಮಿಷನ್ ಆಸ್ಪತ್ರೆ ರಸ್ತೆ, ಕಬೀರ್ ರಸ್ತೆ, ಕಾಳಮ್ಮ ಗುಡಿ ರಸ್ತೆ, ಇರ್ವಿನ್ ರಸ್ತೆ, ಕುರುಬಗೇರಿ, ಕುಂಬಾರಗೇರಿ, ಅಶೋಕ ರಸ್ತೆ, ನಜರಬಾದ್‌, ಮೃಗಾಲಯ ರಸ್ತೆ ಮಾರ್ಗವಾಗಿ ಸಾಗಿ ಭಾನುವಾರ (ಏ.೨೬ರಂದು) ಬೆಳಗ್ಗೆ ದೇವಸ್ಥಾನಕ್ಕೆ ಹಿಂತಿರುಗಿತು.

ಕರಗ ಮಹೋತ್ಸವ ವಿದ್ಯುತ್ ದೀಪಾಲಂಕಾರಗಳಿಂದ ಕಂಗೊಳಿಸಿತು. ಮೆರವಣಿಗೆಗೆ ವೀರಗಾಸೆ, ಕಂಸಾಳೆ, ಡೊಳ್ಳು, ತಮಟೆ, ಗಾರುಡಿ ಗೊಂಬೆ, ನಾದಸ್ವರ ಸೇರಿದಂತೆ ವಿವಿಧ ಕಲಾ ತಂಡಗಳು ಮೆರುಗು ನೀಡಿದವು.

ಮಹತ್ವ
ಮೈಸೂರು ಕರಗ ಮಹೋತ್ಸವವು ಕೇವಲ ಧಾರ್ಮಿಕ ಕಾರ್ಯಕ್ರಮವಷ್ಟೇ ಅಲ್ಲ, ಇದು ಸಾಂಸ್ಕೃತಿಕ ಮತ್ತು ಸಾವಾಜಿಕ ಸೌಹಾರ್ದತೆಯ ಸಂಕೇತವಾಗಿದೆ. ಈ ಉತ್ಸವವು ಸ್ಥಳೀಯ ಜನರನ್ನು ಒಗ್ಗೂಡಿಸುವುದರ ಜತೆಗೆ, ಪರಂಪರೆಯನ್ನು ಉಳಿಸಿ-ಬೆಳೆಸುವಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಕರಗದ ಸಂದರ್ಭದಲ್ಲಿ ಸಾಂಪ್ರದಾಯಿಕ ಕಲೆಗಳು, ನೃತ್ಯ, ಸಂಗೀತ ಮತ್ತು ಇತರ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಳ್ಳುತ್ತವೆ. ಇದು ಯು ಜನಾಂಗಕ್ಕೆ ತಮ್ಮ ಸಂಸ್ಕೃತಿಯ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಒದಗಿಸುತ್ತದೆ.

ಅನ್ನ ಸಂತರ್ಪಣೆ
ಕರಗ ಮಹೋತ್ಸವದ ಅಂಗವಾಗಿ ಶನಿವಾರ ಅನ್ನ ಸಂತರ್ಪಣೆ ನಡೆಯಿತು. ಸುಮಾರು ೧೦ ಸಾವಿರ ಭಕ್ತಾದಿಗಳು ಪ್ರಸಾದ ಸ್ವೀಕರಿಸಿದರು ಎಂದು ಮುನೇಶ್ವರ ಸ್ವಾಮಿ ದೇವಸ್ಥಾನದ ಆರ್ಚಕರಾದ ಕಾರ್ತೀಕ್ ತಿಳಿಸಿದರು.

ಕರಗದಲ್ಲಿ ಇಂದು
ಭಾನುವಾರ ಮಧ್ಯಾಹ್ನ ೧೨ ಗಂಟೆಗೆ ಅಂಬಲಿ ಪೂಜೆ ನಡೆಯುತ್ತದೆ. ನಂತರ ಆರಿಶಿನ ನೀರಿನ ಓಕುಳಿ ಆಡಲು ಕರಗವು ದೇವಸ್ಥಾನದಿಂದ ಹೊರಡುವುದು. ನಂತರ ೪ ಗಂಟೆಯಿಂದ ಭಕ್ತಾದಿಗಳಿಂದ ತಂಬಿಟ್ಟು ಆರತಿ ನೆರವೇರಲಿದೆ. ರಾತ್ರಿ ೭ ಗಂಟೆಗೆ ಕರಗವು ದೇವಸ್ಥಾನದಿಂದ ಹೊರಟು ಇಟ್ಟಿಗೆಗೂಡಿನ ಎಲ್ಲಾ ಬೀದಿಗಳಲ್ಲಿ ಆರತಿ ಪೂಜೆ ಸ್ವೀಕರಿಸಿ ದೇವಸ್ಥಾನ ತಲುಪುವುದು. ರಾತ್ರಿ ೧೨ ಗಂಟೆಗೆ ನೈವೇದ್ಯದೊಂದಿಗೆ ಮಹಾಮಂಗಳಾರತಿ ನೆರವೇರಲಿದೆ. ದಿ.೨೭ರ ಸೋಮವಾರದಂದು ಬೆಳಗಿನ ಜಾವ ಬ್ರಾಹ್ಮೀ ಮುಹೂರ್ತದಲ್ಲಿ ಪಶ್ವಿಮವಾಹಿನಿಯಲ್ಲಿ ಕರಗವನ್ನು ವಿಸರ್ಜಿಸಲಾಗುವುದು.

ಆಂದೋಲನ ಡೆಸ್ಕ್

Recent Posts

ರಾಜ್ಯಸಭಾ ಸ್ಥಾನ ಕೇಳಿಲ್ಲ, ಚರ್ಚೆಯೂ ನಡೆಸಿಲ್ಲ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್‌ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…

2 hours ago

ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ನಿಧನ

ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ಇಂದು ವಿಧಿವಶರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಕೆಲ…

4 hours ago

ನೆಹರು ದಾಖಲೆ ಮುರಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ ನಡೆಸಿದ ಪ್ರಧಾನಿ ಎಂಬ ಹೊಸ…

5 hours ago

ಓದುಗರ ಪತ್ರ: ಗೃಹ ಸಚಿವರೇ ಇತ್ತಲೂ ಗಮನಹರಿಸಿ

ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಮತ್ತು ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಗೃಹಮಂತ್ರಿ ಪ್ರಿಯಾಂಕ್…

6 hours ago

ಓದುಗರ ಪತ್ರ: ಹೀಗೇಕೆ ಭಾವಿಸಬಾರದು?

ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ತಪ್ಪಿದ್ದು ಕರ್ನಾಟಕದ ಜನರಿಗೆ ಮಾಡಿದ ಅವಮಾನ ಎಂದು ಭಾವಿಸಿ ತಪ್ಪು ತಿಳಿಯುವುದಕ್ಕಿಂತ... ಇಳಿ ವಯಸ್ಸಿನಲ್ಲಿರುವ ದೇವೇಗೌಡರು…

6 hours ago

ಓದುಗರ ಪತ್ರ: ಎಲ್ಲ ಇಲಾಖಾ ಪರೀಕ್ಷೆಗಳ ಹೊಣೆಯನ್ನು ಕೆಇಎಗೆ ನೀಡಲಿ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ೨೦೨೪-೨೦೨೫ ರಲ್ಲಿ ಸುಮಾರು ೨೫ ಕ್ಕೂ ಹೆಚ್ಚು ಪರೀಕ್ಷೆಗಳನ್ನು ಆಯೋಜಿಸಿ ೨೬ ಲಕ್ಷಕ್ಕೂ ಹೆಚ್ಚು…

6 hours ago