ಮೈಸೂರು: ಅಕ್ರಮ ಸೈಟ್ ಹಂಚಿಕೆ ಆರೋಪ ಎದುರಿಸುತ್ತಿರುವ ಮೈಸೂರು ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆ ಸರ್ಕಾರ ಅನುಮತಿ ನೀಡಿದೆ.
ಮೈಸೂರು ಮುಡಾದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಹಾಗೂ ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು.
ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಇಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಇದನ್ನು ಓದಿ : ಆನ್ಲೈನ್ ಬೆಟ್ಟಿಂಗ್ ಆಪ್: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಇಡಿ ಸಮನ್ಸ್
ಇನ್ನು ಸಿಎಂ ಸಿದ್ದರಾಮಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆ ತಡವಾಗಿದ್ದಕ್ಕೆ ಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿದೆ. ಕಳೆದ ಆರು ತಿಂಗಳಿನಿಂದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ ಎಂದು ಚಾಟಿ ಬೀಸಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಪೊಲೀಸರ ನಡೆಯಿಂದ ಅವಮಾನ ಎದುರಿಸುತ್ತಿದ್ದೇನೆ. ಮಾನಸಿಕವಾಗಿ ಕುಗ್ಗಿದ್ದೇನೆ. ಇದರಿಂದ ಬೇಗ ತನಿಖೆಗೆ ಆದೇಶ ನೀಡಿ ಎಂದು ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಎಚ್.ವಿ.ರಾಜೀವ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಬೇಕಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ವಾದಿಸಿದ್ದು, ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್.29ಕ್ಕೆ ಮುಂದೂಡಿಕೆ ಮಾಡಿದೆ.
ಹೊಸದಿಲ್ಲಿ : ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ ಅನುಮತಿ ನೀಡಿದೆ. ಚಲಿಸಲು ಅಥವಾ ಮಾತನಾಡಲು…
ಟೆಹರಾನ್: ವಿಶ್ವದ ಪ್ರಮುಖ ಇಂಧನ ಸಾಗಣೆ ಮಾರ್ಗವಾದ ಹಾರ್ಮುಜ್ ಜಲಸಂಧಿಯ ಬಳಿ ನೌಕಾ ಮೈನ್ಗಳನ್ನು ಅಳವಡಿಸಲು ಸಜ್ಜಾಗಿದ್ದ ಇರಾನ್ನ 16…
ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್ನಲ್ಲೇ ಜಿಲ್ಲಾಧಿಕಾರಿಗಳು…
ಬೆಂಗಳೂರು: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ನ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…
ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…
ಬೆಂಗಳೂರು: ಬಜೆಟ್ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್ಎಎಲ್ ವಿಮಾನ…