ಮೈಸೂರು: ಅಕ್ರಮ ಸೈಟ್ ಹಂಚಿಕೆ ಆರೋಪ ಎದುರಿಸುತ್ತಿರುವ ಮೈಸೂರು ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆ ಸರ್ಕಾರ ಅನುಮತಿ ನೀಡಿದೆ.
ಮೈಸೂರು ಮುಡಾದ ಮಾಜಿ ಅಧ್ಯಕ್ಷ ಎಚ್.ವಿ.ರಾಜೀವ್ ಹಾಗೂ ದಿನೇಶ್ ವಿರುದ್ಧ ತನಿಖೆ ನಡೆಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪೊಲೀಸರು ಪ್ರಾಸಿಕ್ಯೂಷನ್ ಅನುಮತಿ ಕೋರಿದ್ದರು.
ದಿನೇಶ್ ವಿರುದ್ಧ ಮಾತ್ರ ತನಿಖೆಗೆ ಸರ್ಕಾರ ಅನುಮತಿ ನೀಡಿದೆ. ಈಗಾಗಲೇ ಇಡಿ ಅಧಿಕಾರಿಗಳು ದಿನೇಶ್ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.
ಇದನ್ನು ಓದಿ : ಆನ್ಲೈನ್ ಬೆಟ್ಟಿಂಗ್ ಆಪ್: ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪಗೆ ಇಡಿ ಸಮನ್ಸ್
ಇನ್ನು ಸಿಎಂ ಸಿದ್ದರಾಮಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆ ತಡವಾಗಿದ್ದಕ್ಕೆ ಕೋರ್ಟ್ ತೀವ್ರ ಅಸಮಾಧಾನ ಹೊರಹಾಕಿದೆ. ಕಳೆದ ಆರು ತಿಂಗಳಿನಿಂದ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ ಎಂದು ಚಾಟಿ ಬೀಸಿದೆ.
ಈ ಎಲ್ಲಾ ಬೆಳವಣಿಗೆಗಳ ನಡುವೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ಪೊಲೀಸರ ನಡೆಯಿಂದ ಅವಮಾನ ಎದುರಿಸುತ್ತಿದ್ದೇನೆ. ಮಾನಸಿಕವಾಗಿ ಕುಗ್ಗಿದ್ದೇನೆ. ಇದರಿಂದ ಬೇಗ ತನಿಖೆಗೆ ಆದೇಶ ನೀಡಿ ಎಂದು ಕೋರ್ಟ್ಗೆ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಎಚ್.ವಿ.ರಾಜೀವ್ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಬೇಕಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲರು ವಾದಿಸಿದ್ದು, ವಾದ ಆಲಿಸಿದ ನ್ಯಾಯಾಲಯ ವಿಚಾರಣೆಯನ್ನು ಸೆಪ್ಟೆಂಬರ್.29ಕ್ಕೆ ಮುಂದೂಡಿಕೆ ಮಾಡಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…