yadhuveer krishnadatta wadiyar
ಮೈಸೂರು: ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಪ್ರತಿನಿಧಿಗಳೇ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ಹೊರಹಾಕಿದ್ದಾರೆ.
ಮಳೆಯಿಂದ ಮೈಸೂರು ನಗರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಂಸದ ಯದುವೀರ್ ಒಡೆಯರ್ ಅವರು, ಮೈಸೂರು ಮಹಾನಗರ ಪಾಲಿಕೆಗೆ ಚುನಾವಣೆ ಆಗಿಲ್ಲ. 2 ವರ್ಷದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ.
ಇದನ್ನೂ ಓದಿ:- ನಾವು ಪಾಕಿಸ್ತಾನದೊಳಕ್ಕೆ ನುಗ್ಗಿ ಹೊಡೆದಿದ್ದೇವೆ: ಸಂಸದ ಯದುವೀರ್ ಒಡೆಯರ್
ಯಾಕೆ ಸರ್ಕಾರ ಪಾಲಿಕೆ ಚುನಾವಣೆ ನಡೆಸುತ್ತಿಲ್ಲ ಎಂಬುದೇ ತಿಳಿಯುತ್ತಿಲ್ಲ. ನಾವು ಸಾಕಷ್ಟು ಬಾರಿ ಚುನಾವಣೆ ನಡೆಸಿ ಎಂದು ಮನವಿ ಮಾಡಿದ್ದೇವೆ. ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಯಾರು ಕೂಡ ಪ್ರತಿನಿಧಿಗಳೇ ಇಲ್ಲ. ಜನಪ್ರತಿನಿಧಿಗಳು ಇಲ್ಲದೆ ಇರುವುದರಿಂದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಆದಷ್ಟು ಬೇಗ ತೀರ್ಮಾನ ಮಾಡಬೇಕು ಎಂದು ಆಗ್ರಹಿಸಿದರು.
ಮಂಗಳೂರು: ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿದ್ದ ಕೊಲ್ಲಮೊಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿಗಳು ಆರು ತಿಂಗಳಿಂದ ಸರಿಯಾಗಿ ಸಂಬಳ ಆಗದ ಕಾರಣ…
ಮೈಸೂರು: ಮೈಸೂರು ಜಿಲ್ಲೆ ಸರಗೂರಿನ ತಾಲ್ಲೂಕು ಕಚೇರಿ ಹಾಗೂ ಹಾಸನದ ಆಲೂರು ತಾಲ್ಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ…
ಮೈಸೂರು: ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ವಿರೋಧಿಸುತ್ತಾರೆ. ಪ್ರಚೋದನಾಕಾರಿ ಭಾಷಣ ಮಾಡದೆ ಹೋದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ ಎಂದರು. ಬಿಜೆಪಿಯವರು…
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು ತಮ್ಮ ನಿವಾಸದ ಬಳಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕೆಲ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಜೊತೆಗೆ ವಿವಿಧ ಜಿಲ್ಲೆಗಳಲ್ಲಿಯೂ ಗಾಳಿಯ ಗುಣಮಟ್ಟ ಕಳಪೆ…
ಬೆಂಗಳೂರು: ಬಿಜೆಪಿ ದೃಷ್ಟಿಯಲ್ಲಿಟ್ಟುಕೊಂಡು ದ್ವೇಷ ಭಾಷಣ ಕಾಯ್ದೆಯನ್ನು ತಂದಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕಾರಣ ಮಾಡಲು ಹೊರಟಿದ್ದಾರೆ ಎಂದು ಗೃಹ ಸಚಿವ…