ಮೈಸೂರು ನಗರ

ಆದಷ್ಟು ಬೇಗ ಮೈಸೂರು ಪಾಲಿಕೆ ಚುನಾವಣೆ ನಡೆಸಬೇಕು: ಸರ್ಕಾರಕ್ಕೆ ಸಂಸದ ಯದುವೀರ್‌ ಒಡೆಯರ್‌ ಆಗ್ರಹ

ಮೈಸೂರು: ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಪ್ರತಿನಿಧಿಗಳೇ ಇಲ್ಲ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ.

ಮಳೆಯಿಂದ ಮೈಸೂರು ನಗರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ಮೈಸೂರು ಮಹಾನಗರ ಪಾಲಿಕೆಗೆ ಚುನಾವಣೆ ಆಗಿಲ್ಲ. 2 ವರ್ಷದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದೆ.

ಇದನ್ನೂ ಓದಿ:- ನಾವು ಪಾಕಿಸ್ತಾನದೊಳಕ್ಕೆ ನುಗ್ಗಿ ಹೊಡೆದಿದ್ದೇವೆ: ಸಂಸದ ಯದುವೀರ್‌ ಒಡೆಯರ್‌ 

ಯಾಕೆ ಸರ್ಕಾರ ಪಾಲಿಕೆ ಚುನಾವಣೆ ನಡೆಸುತ್ತಿಲ್ಲ ಎಂಬುದೇ ತಿಳಿಯುತ್ತಿಲ್ಲ. ನಾವು ಸಾಕಷ್ಟು ಬಾರಿ ಚುನಾವಣೆ ನಡೆಸಿ ಎಂದು ಮನವಿ ಮಾಡಿದ್ದೇವೆ. ಮಳೆ ಬಂದು ಏನೇ ಸಮಸ್ಯೆ ಆದರೂ ಅದನ್ನು ಹೇಳಿಕೊಳ್ಳಲು ಪಾಲಿಕೆಯಲ್ಲಿ ಯಾರು ಕೂಡ ಪ್ರತಿನಿಧಿಗಳೇ ಇಲ್ಲ. ಜನಪ್ರತಿನಿಧಿಗಳು ಇಲ್ಲದೆ ಇರುವುದರಿಂದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಆದಷ್ಟು ಬೇಗ ತೀರ್ಮಾನ ಮಾಡಬೇಕು ಎಂದು ಆಗ್ರಹಿಸಿದರು.

 

ಆಂದೋಲನ ಡೆಸ್ಕ್

Recent Posts

ಗಾಂಧಿಯ ಸರಳತೆಯತ್ತ ನಡೆಯುತ್ತಿರುವ ಯುವಜನತೆ

ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…

42 mins ago

ಮಾರ್ಟಿನ್ ಲೂಥರ್ ಕಿಂಗ್ ಕಣ್ಣಲ್ಲಿ ಮಹಾತ್ಮ ಗಾಂಧಿ…

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…

46 mins ago

ಮಾಂಸಾಹಾರ ಬಿಟ್ಟರೂ ಮಿತ್ರನ ಗೆಳೆತನ ಬಿಡಲಾಗಲಿಲ್ಲ

ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…

52 mins ago

ಡಿಕೆಶಿ ಸಂಪುಟದಲ್ಲಿ ಯಾರ‍್ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ?

ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್‌ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್‌ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…

57 mins ago

ಈ ಬಾರಿ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

1 hour ago

ಕಂದಾಯ ದಾಖಲೆಯಲ್ಲಿ ೪ ವಾರ್ಡ್‌ಗಳೇ ನಾಪತ್ತೆ!

ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್‌ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್‌ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…

1 hour ago