ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ ನಗರ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ ಮಾಡಿದ್ದಾರೆ.
ಈ ಸಂಬಂಧ ಗುರುವಾರ ತಮ್ಮ ಕಚೇರಿಯ ಸಭಾಂಗಣದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಈಗಾಗಲೇ ನಗರದ ವ್ಯಾಪ್ತಿಯಲ್ಲಿ ಡಿಸಿಪಿ ಅವರ ನೇತೃತ್ವದಲ್ಲಿ ರೌಡಿ ಪ್ರತಿಬಂಧಕ ದಳ ಸಕ್ರಿಯವಾಗಿದೆ ಎಂದು ತಿಳಿಸಿದರು.
ತಳ ಮಟ್ಟದಲ್ಲಿ ರೌಡಿಗಳ ಅಕ್ರಮ ಚಟುವಟಿಕೆಗಳ ಬಗ್ಗೆ ನಿಗಾ ವಹಿಸುವುದರೊಂದಿಗೆ ಅಕ್ರಮ ತಡೆಗಟ್ಟಲು ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಪ್ರತಿಬಂಧಕ ಸ್ಥಳ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿ ಠಾಣಾ ವ್ಯಾಪ್ತಿಯಲ್ಲಿ ಎಸ್ಐ ನೇತೃತ್ವದಲ್ಲಿ ನಾಲ್ವರು ಸಿಬ್ಬಂದಿಗಳನ್ನು ಒಳಗೊಂಡ ರೌಡಿ ಪ್ರತಿಬಂಧಕ ದಳವನ್ನು ಸ್ಥಾಪಿಸುವ ಮೂಲಕ ಠಾಣಾ ವ್ಯಾಪ್ತಿಯಲ್ಲಿನ ರೌಡಿಗಳ ಚಲನ ವಲನಗಳ ಮೇಲೆ ವಿಶೇಷ ನಿಗಾವಹಿಸಬೇಕು ಎಂದು ಎಸಿಪಿ ಮತ್ತು ಇನ್ಸ್ಪೆಕ್ಟರ್ಗಳಿಗೆ ಸೂಚನೆ ನೀಡಲಾಗಿದೆ ಎಂದು ವಿವರಿಸಿದರು.
ಇದುವರೆವಿಗೂ ಮಾದಕ ವಸ್ತು ಸಾಗಾಟದಲ್ಲಿ ಸಕ್ರಿಯವಾಗಿದ್ದ ೨೦ಕ್ಕೂ ಹೆಚ್ಚು ಮಂದಿ ರೌಡಿ ಶೀಟರ್ಗಳನ್ನು ಪತ್ತೆ ಹಚ್ಚಿ ಗಡಿಪಾರು ಮಾಡಲಾಗಿದೆ. ಈ ಕಾರ್ಯಚರಣೆ ನಿರಂತರವಾಗಿ ನಡೆಯಲಿದೆ. ಇದರೊಂದಿಗೆ ಡಿಸಿಪಿ ನೇತೃತ್ವದಲ್ಲಿರುವ ರೌಡಿ ನಿಗ್ರಹ ದಳವು ಸಹ ಪ್ರತ್ಯೇಕವಾಗಿ ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಲಿದೆ ಎಂದರು.
ಮೈಸೂರು ನಗರದಲ್ಲಿ ೭೦೦ ಮಂದಿ ರೌಡಿಶೀಟರ್ಗಳನ್ನು ಪಟ್ಟಿ ಮಾಡಲಾಗಿದ್ದು, ಕೆಲವರು ಮಾತ್ರ ಸಕ್ರೀಯರಾಗಿದ್ದಾರೆ. ಅಂತಹವರ ಮೇಲೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ರೌಡಿಗಳನ್ನು ಪತ್ತೆ ಹಚ್ಚಿ: ಕಮಿಷನರ್
ಇದಕ್ಕೂ ಮುನ್ನ ಅಧಿಕಾರಿಗಳ ಸಭೆ ನಡೆಸಿದ ಆಯುಕ್ತರು, ನಿಮ್ಮ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಪಟ್ಟಿಯಲ್ಲಿ ಇಲ್ಲದಿದ್ದರೂ, ರೌಡಿ ಚಟುವಟಿಕೆಯಲ್ಲಿ ನಿರತರಾಗಿರುವವರನ್ನು ಪತ್ತೆಹಚ್ಚಿ ಅಂತಹವರನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಬೇಕು. ಅಗತ್ಯವಿದ್ದಲ್ಲಿ ರೌಡಿ ಶೀಟರ್ ತೆರೆಯಬೇಕು ಎಂದು ಸೂಚನೆ ನೀಡಿದರು.
ಹಳೆಯ ರೌಡಿಗಳು ವಾಸಿಸುವ ಸ್ಥಳ, ಅವರ ಆಧಾರ್ ಕಾರ್ಡ್, ಪಾನ್ ಕಾರ್ಡ್, ಅವರ ಬ್ಯಾಂಕ್ ಖಾತೆ ವಿವರ, ಅವರ ಉದ್ಯೋಗ ಎಲ್ಲದರ ಸಂಪೂರ್ಣ ಮಾಹಿತಿಯನ್ನು ನೀವು ಹೊಂದಿರಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಡಿಸಿಪಿ ಕೆ.ಎನ್.ಸುಂದರರಾಜ್, ನಗರ ವ್ಯಾಪ್ತಿಯ ನಾಲ್ಕು ವಿಭಾಗದ ಎಸಿಪಿಗಳು, ಎಲ್ಲಾ ಠಾಣೆಯ ಇನ್ಸಪೆಕ್ಟರ್ಗಳು ಸಭೆಯಲ್ಲಿ ಹಾಜರಿದ್ದರು.
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…