Mysore
19
scattered clouds

Social Media

ಬುಧವಾರ, 04 ಫೆಬ್ರವರಿ 2026
Light
Dark

ಮೈಸೂರು | ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿರುವ ಪೊಲೀಸರು

ಮೈಸೂರು: ನಗರದಲ್ಲಿ ಅಪರಾಧ ಕೃತ್ಯಗಳಿಗೆ ಹಾಗೂ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಪೊಲೀಸರು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಗಳ್ಳತನ, ಸರಗಳ್ಳತನ, ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ವೇಳೆಗೆ ಹೆಚ್ಚು ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡಿ ಅಪರಾದಗಳ ಬಗ್ಗೆ ಎಚ್ಚರ ವಹಿಸುವಂತೆ ಜಾಗೃತಿ ಮೂಡಿಸುತ್ತಿದ್ದಾರೆ.

ಇದನ್ನೂ ಓದಿ:- ಸ್ವಗ್ರಾಮಕ್ಕೆ ಭೇಟಿ: ಸ್ನೇಹಿತರೊಂದಿಗೆ ಹಳೆಯ ನೆನಪು ಮೆಲುಕು ಹಾಕಿದ ಸಚಿವ ಡಾ.ಎಚ್.ಸಿ.ಮಹದೇವಪ್ಪ.

ಮೈಸೂರು ನಗರದ ಕೃಷ್ಣ ರಾಜ ಪೊಲೀಸ್ ಠಾಣೆ, ಆಲನಹಳ್ಳಿ ಪೊಲೀಸ್ ಠಾಣೆ, ಸರಸ್ವತಿಪುರಂ ಪೊಲೀಸ್ ಠಾಣೆ, ವಿದ್ಯಾರಣ್ಯಪುರಂ ಪೊಲೀಸ್ ಠಾಣೆ, ನಜರ್ ಬಾದ್ ಪೊಲೀಸ್ ಠಾಣೆ, ಹೆಬ್ಬಾಳ್ ಪೊಲೀಸ್ ಠಾಣೆ, ದೇವರಾಜ ಹಾಗೂ ಲಷ್ಕರ್ ಪೋಲಿಸ್ ಠಾಣೆಯ ಪೊಲೀಸರುಗಳು ತಮ್ಮ ತಮ್ಮ ಪೊಲೀಸ್ ಠಾಣಾ ಸರಹದ್ದಿನಲ್ಲಿ ಗಸ್ತು ಮಾಡಿ, ಬಸ್ ನಿಲ್ದಾಣ, ಸಾರ್ವಜನಿಕ ಪಾರ್ಕ್ ಗಳು, ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಮಹಿಳೆಯರಿಗೆ, ಹಿರಿಯ ನಾಗರಿಕರಿಗೆ ಮನೆಗಳ್ಳತನ, ಸರಗಳ್ಳತನ ಹಾಗೂ ಸೈಬರ್ ಅಪರಾಧಗಳ ಬಗ್ಗೆ ಅರಿವು ಮೂಡಿಸಿದ್ದಾರೆ.

Tags:
error: Content is protected !!