ಮೈಸೂರು: ನಗರದ ಎಸ್ಪಿ ಕಚೇರಿಯ ಪಕ್ಕದ ರಸ್ತೆಯಲ್ಲಿ ಕಟಾವು ಮಾಡಿದ್ದ 40 ಮರಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದ ವಿವಿಧ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ನಿನ್ನೆ ತಾನೇ ಅದೇ ರಸ್ತೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಇಂದು ಅದೇ ಗಿಡಗಳಿಗೆ ಗಾರ್ಡ್ಗಳನ್ನು ಹಾಕುವ ಮೂಲಕ ರಕ್ಷಣೆಗೆ ಮುಂದಾಗಿದ್ದಾರೆ.
ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಿನ್ನೆ ಮರಗಳನ್ನು ಕಡಿದ ಜಾಗದಲ್ಲಿ ನೆಟ್ಟ ಸಸಿಗಳಿಗೆ ರೈತ ಸಂಘದ ಪ್ರಮುಖರು ರಘು ಲಾಲ್ ಕಂಪನಿಯ ರಾಘವನ್ ಅವರೊಂದಿಗೆ ಚರ್ಚಿಸಿ, ರಘುಲಾಲ್ ಕಂಪನಿಯ ವತಿಯಿಂದ ಮೆಟಲ್ ಗಾರ್ಡ್ಗಳನ್ನು ಪಡೆದುಕೊಂಡು ಇಂದು ರೈತ ಸಂಘವು ಮೆಟಲ್ ಗಾರ್ಡ್ಗಳನ್ನು ಸಸಿಗಳ ಸುತ್ತ ಹಾಕಿ ನೆಲಕ್ಕೆ ಕಾಂಕ್ರೀಟ್ ಹಾಕುವ ಮೂಲಕ ಅದನ್ನು ಭದ್ರಪಡಿಸುವ ಕೆಲಸ ಮಾಡಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮಂಜು ಕಿರಣ್ ನೇತೃತ್ವದಲ್ಲಿ ಗಿಡಗಳ ರಕ್ಷಣೆಗೆ ಗಾರ್ಡ್ಗಳನ್ನು ಅಳವಡಿಸಲಾಗಿದೆ.
ಇದನ್ನೂ ಓದಿ:- ಮೈಸೂರು| ಮರಗಳ ಮಾರಣಹೋಮ ಖಂಡಿಸಿ ಪುಟಾಣಿಗಳಿಂದ ಪ್ರತಿಭಟನೆ
ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್ನಲ್ಲಿ…
ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…
ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…
ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…
ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…