ಮೈಸೂರು: ನಗರದ ಎಸ್ಪಿ ಕಚೇರಿಯ ಪಕ್ಕದ ರಸ್ತೆಯಲ್ಲಿ ಕಟಾವು ಮಾಡಿದ್ದ 40 ಮರಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದ ವಿವಿಧ ಸಂಘಟನೆಗಳು ಹಾಗೂ ರೈತ ಸಂಘಟನೆಗಳು ನಿನ್ನೆ ತಾನೇ ಅದೇ ರಸ್ತೆಯಲ್ಲಿ ಗಿಡಗಳನ್ನು ನೆಡುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದರು. ಇಂದು ಅದೇ ಗಿಡಗಳಿಗೆ ಗಾರ್ಡ್ಗಳನ್ನು ಹಾಕುವ ಮೂಲಕ ರಕ್ಷಣೆಗೆ ಮುಂದಾಗಿದ್ದಾರೆ.
ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಿನ್ನೆ ಮರಗಳನ್ನು ಕಡಿದ ಜಾಗದಲ್ಲಿ ನೆಟ್ಟ ಸಸಿಗಳಿಗೆ ರೈತ ಸಂಘದ ಪ್ರಮುಖರು ರಘು ಲಾಲ್ ಕಂಪನಿಯ ರಾಘವನ್ ಅವರೊಂದಿಗೆ ಚರ್ಚಿಸಿ, ರಘುಲಾಲ್ ಕಂಪನಿಯ ವತಿಯಿಂದ ಮೆಟಲ್ ಗಾರ್ಡ್ಗಳನ್ನು ಪಡೆದುಕೊಂಡು ಇಂದು ರೈತ ಸಂಘವು ಮೆಟಲ್ ಗಾರ್ಡ್ಗಳನ್ನು ಸಸಿಗಳ ಸುತ್ತ ಹಾಕಿ ನೆಲಕ್ಕೆ ಕಾಂಕ್ರೀಟ್ ಹಾಕುವ ಮೂಲಕ ಅದನ್ನು ಭದ್ರಪಡಿಸುವ ಕೆಲಸ ಮಾಡಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮಂಜು ಕಿರಣ್ ನೇತೃತ್ವದಲ್ಲಿ ಗಿಡಗಳ ರಕ್ಷಣೆಗೆ ಗಾರ್ಡ್ಗಳನ್ನು ಅಳವಡಿಸಲಾಗಿದೆ.
ಇದನ್ನೂ ಓದಿ:- ಮೈಸೂರು| ಮರಗಳ ಮಾರಣಹೋಮ ಖಂಡಿಸಿ ಪುಟಾಣಿಗಳಿಂದ ಪ್ರತಿಭಟನೆ
ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…
ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…
ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ಹೇಳಿದ್ದಾರೆ. ಈ ಬಗ್ಗೆ…
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…