ಮೈಸೂರು ನಗರ

ಮೈಸೂರು: ಕೇಂದ್ರ ಬಜೆಟ್‌ ವಿರೋಧಿಸಿ ಪ್ರತಿಭಟನೆ

ಮೈಸೂರು: ಕೇಂದ್ರಕ್ಕೆ ಅತಿ ಹೆಚ್ಚು ತೆರಿಗೆ ನೀಡುವ ದಕ್ಷಿಣ ಭಾರತದ ರಾಜ್ಯಗಳಿಗೆ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಚಿಪ್ಪು ನೀಡಲಾಗಿದೆ ಎಂದು ಆರೋಪಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಹಳೆ ಜಿಲ್ಲಾಧಿಕಾರಿ ಎದುರು ಪ್ರತಿಭಟನೆ ನಡೆಸಿ ಕೈನಲ್ಲಿ ತೆಂಗಿನಕಾಯಿ ಚಿಪ್ಪು ತೋರಿಸಿ ಅಣುಕು ಪ್ರದರ್ಶನ ನೀಡಿ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿತ್ತ ಸಚಿವೆ ನಿರ್ಮಲ ಸೀತಾರಾಮ್ ಎಂಟು ಬಾರಿ ಬಜೆಟ್ ಮಂಡಿಸಿದರು ಸಹ ರಾಜ್ಯದ ಬಾಯಾರಿಕೆ ತೀರಿಸುವಂತಹ ಮಹದಾಯಿ ಯೋಜನೆ, ಮೇಕೆದಾಟು ಕುಡಿಯುವ ನೀರಿನ ಯೋಜನೆ, ಬೃಹತ್ ಕೈಗಾರಿಕೆಗಳು, ವಿಮಾನ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸದೆ ಇರುವುದು ಕನ್ನಡ ನಾಡಿನ ವಿರೋಧಿ ನೀತಿಯನ್ನು ಎತ್ತು ತೋರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಿಂದ ಆಯ್ಕೆಯಾಗಿರುವ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಡಿಯುವ ನೀರಿನ ಯೋಜನೆಯನ್ನು ಈ ಬಾರಿ ಬಜೆಟ್‌ನಲ್ಲಿ ತಂದೆ ತರುತ್ತೇನೆ ಎಂದು ನೀಡಿದ ಭರವಸೆ ಹುಸಿಯಾಗಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣ ಉಪ್ಪಿನ ಕಾರ್ಖಾನೆ ಪುನಶ್ಚೇತನ ಗೊಳಿಸಲು ೧೧ ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ. ರಾಜ್ಯದ ಭದ್ರಾವತಿ ವಿಶ್ವೇಶ್ವರಯ್ಯ ಉಕ್ಕಿನ ಕಾರ್ಖಾನೆಗೆ ಕವಡೆ ಕಾಸು ನೀಡಲಿಲ್ಲ. ಇದರ ಬಗ್ಗೆ ನಮ್ಮ ಸಚಿವರು ಮಾತಾಡಲಿಲ್ಲ. ಮಂಡ್ಯದಲ್ಲಿ ಗೆದ್ದು ಮಂಡ್ಯ ಜನತೆಗೆ ಯಾವ ಸೌಲಭ್ಯನೂ ಸಹ ತಂದು ಕೊಡಲಿಲ್ಲ ಎಂದು ಕಿಡಿಕಾರಿದರು.

ದಕ್ಷಿಣ ಭಾರತದಲ್ಲಿ ಅತಿ ಹೆಚ್ಚು ತೆರಿಗೆ ಬರಿಸುತ್ತಿರುವ ರಾಜ್ಯ ಕರ್ನಾಟಕ. ಆದರೆ ಬಿಡುಗಡೆ ಆಗುತ್ತಿರುವ ಹಣ ಅತ್ಯಲ್ಪ. ಈ ಅನ್ಯಾಯದ ಬಗ್ಗೆ ಇನ್ನಾದರೂ ಎಚ್ಚೆತ್ತು ಪಕ್ಷಾತೀತವಾಗಿ ಸಂಸದರು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದರು.

ವೇದಿಕೆಯ ಅಧ್ಯಕ್ಷ ಎಸ್.ಬಾಲಕೃಷ್ಣ, ಪದಾಧಿಕಾರಿಗಳಾದ ನಾಲ ಬೀದಿರವಿ, ಗುರುಬಸಪ್ಪ, ಗೋಪಿ, ಬೋಗಾದಿ ಸಿದ್ದೇಗೌಡ, ಪ್ಯಾಲೇಸ್ ಬಾಬು, ಸಿದ್ದಪ್ಪ ಎಲ್‌ಐಸಿ, ಗೋವಿಂದ್ ರಾಜ್, ಸ್ವಾಮಿ, ಬೀಡಾ ಬಾಬು, ಮನೋಹರ್, ಹರೀಶ್, ವಾದಪ್ಪ, ಅರವಿಂದ, ಮದನ್, ಸ್ವಾಮಿ ಗೈಡ್, ಚಿನ್ನಪ್ಪ, ಸುನಿಲ್, ಶಿವು ಮುಂತಾದವರು ಇನ್ನಿತರರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago