ಮೈಸೂರು ನಗರ

ಸ್ವಚ್ಛ ನಗರಿ ಮೈಸೂರಿನಲ್ಲಿ ಅಶುಚಿತ್ವ ತಾಂಡವ: ಸಂಜೆಯಾಗುತ್ತಿದ್ದಂತೆ ಸೊಳ್ಳೆಗಳ ಕಾಟ

ಮೈಸೂರು: ಸಾಂಸ್ಕೃತಿಕ ನಗರಿ, ಸ್ವಚ್ಛ ನಗರಿ ಹಾಗೂ ಮಲ್ಲಿಗೆ ನಗರಿ ಎಂದೆಲ್ಲಾ ಕರೆಯಿಸಿಕೊಳ್ಳುವ ಮೈಸೂರಿನಲ್ಲಿ ಒಂದೆಡೆ ಸ್ವಚ್ಛತಾ ಸರ್ವೇಕ್ಷಣಾ ಅಭಿಯಾನ ನಡೆಯುತ್ತಿದ್ದು, ಇನ್ನೊಂದೆಡೆ ಯುಜಿಡಿ ಸಮಸ್ಯೆಯಿಂದ ರಸ್ತೆ ಗಬ್ಬೆದ್ದು ನಾರುತ್ತಿದೆ.

ಮೈಸೂರಿನ ಅಗ್ರಹಾರದಿಂದ ಅರಮನೆಗೆ ಸಂಚರಿಸುವ ಮಾರ್ಗದಲ್ಲಿ ಯುಜಿಡಿ ತೆರೆದುಕೊಂಡಿದ್ದು, ಯುಜಿಡಿ ಬಾಕ್ಸ್‌ನಿಂದ ರಸ್ತೆ ಮಾರ್ಗದಲ್ಲೇ ಕೊಳಚೆ ನೀರು ಹರಿದು ಗಬ್ಬೆದ್ದು ನಾರುತ್ತಿದೆ. ಪರಿಣಾಮ ವಾಹನ ಸವಾರರು ಕೊಳಚೆ ನೀರಿನಲ್ಲೇ ಸಂಚರಿಸುತ್ತಿದ್ದು, ಜನಸಾಮಾನ್ಯರಂತೂ ಮೂಗು ಮುಚ್ಚಿ ರಸ್ತೆ ದಾಟುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ರಸ್ತೆಯಲ್ಲಿ ಸಂಜೆಯಾದರೆ ಸಾಕು ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಕಳೆದ ಒಂದು ವಾರದಿಂದಲೂ ರಸ್ತೆಯಲ್ಲಿ ಕೊಳಚೆ ನೀರು ಮಳೆ ನೀರಿನಂತೆ ಹರಿಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕಂಡೂ ಕಾಣದಂತೆ ಕಣ್ಮುಚ್ಚಿ ಕುಳಿತಿದ್ದಾರೆ.

ಸದ್ಯ ಸ್ವಚ್ಛತಾ ಅಭಿಯಾನದಲ್ಲಿ ನಿರತರಾಗಿರುವ ಪಾಲಿಕೆ ಅಧಿಕಾರಿಗಳು, ನಗರದ ಮಧ್ಯಭಾಗದ ಸಮಸ್ಯೆಯನ್ನೇ ಸರಿಪಡಿಸದಿರುವುದು ಸಾರ್ವಜನಿಕ ವಲಯದಲ್ಲಿ ಬೇಸರ ತಂದಿದೆ.

ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತನಾಡಿರುವ ಸಾರ್ವಜನಿಕರು, ಈ ರಸ್ತೆಯಲ್ಲಿ ವಾಹನ ಸವಾರರು ಹಾಗೂ ಸಾರ್ವಜನಿಕರು ಓಡಾಡಲು ತೀವ್ರ ಕಷ್ಟವಾಗುತ್ತಿದೆ. ಸಂಜೆಯಾದರಂತೂ ಈ ರಸ್ತೆಗೆ ಬರಲು ಸವಾರರು ಹಿಂದೇಟು ಹಾಕುತ್ತಿದ್ದಾರೆ. ಆದಷ್ಟು ಬೇಗ ಈ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

10 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

14 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

14 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

14 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

14 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago