ಮೈಸೂರು : ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದರು ಕೂಡ ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಪ್ರತಿ ಜಿಲ್ಲೆಯಲ್ಲೂ ಕೂಡ ಒಂದಲ್ಲ ಒಂದು ಪ್ರಕರಣ ಪ್ರತಿದಿನ ಕಂಡುಬರುತ್ತಿದ್ದು, ಸಾಕಷ್ಟು ತಲೆನೋವಾಗಿ ಪರಿಣಮಿಸುವುದರ ಜೊತೆಗೆ ಆತಂಕ ಕೂಡ ಉಂಟುಮಾಡುತ್ತಿದೆ. ಕೇವಲ ಪ್ರಕರಣಗಳ ಸಂಖ್ಯೆ ಮಾತ್ರವಲ್ಲ ಒಬ್ಬರಲ್ಲ ಒಬ್ಬರು ಈ ಡೆಂಗ್ಯೂ ಮಾರಿಗೆ ಬಲಿಯಾಗುತ್ತಿದ್ದಾರೆ.
ಇನ್ನು ಸಾಂಸ್ಕೃತಿಕ ನಗರ ಮೈಸೂರು ಡೆಂಗ್ಯೂ ಪ್ರಕರಣಗಳಲ್ಲಿ ರಾಜ್ಯದಲ್ಲೇ ೨ನೇ ಸ್ಥಾನದಲ್ಲಿದೆ. ಬೆಂಗಳೂರು ನಂತರ ಮೈಸೂರಿನಲ್ಲಿಯೇ ಹೆಚ್ಚಿನ ಪ್ರಕರಣ ಕಂಡುಬಂದಿವೆ. ಮೈಸೂರಿನಲ್ಲಿ ೩೫ ಮಂದಿ ಈ ಡೆಂಗ್ಯೂ ಗೆ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಈ ಡೆಂಗ್ಯೂಯಿಂದ ಮೈಸೂರಿನಲ್ಲಿ ಇಬ್ಬರು ಬಲಿಯಾಗಿರುವುದು ನಿಜಕ್ಕೂ ಜನರಲ್ಲಿ ಸಾಕಷ್ಟು ಆತಂಕವನ್ನುಂಟು ಮಾಡಿದೆ. ಮೂರು ದಿನಗಳ ಹಿಂದೆಯಷ್ಟೆ ಹುಣಸೂರು ಸಮುದಾಯದ ಆರೋಗ್ಯ ಅಧಿಕಾರಿಯೊಬ್ಬರು ಡೆಂಗ್ಯೂಗೆ ಸಾವನ್ನಪ್ಪಿದ್ರು. ಕಳೆದ ಭಾನುವಾರ (ಜು೭ ) ಜಯದೇವ ಹೃದ್ರೋಗ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಒಬ್ಬರು ಈ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ರಾಜ್ಯದಲ್ಲಿ ೩೦೧ ಸಕ್ರಿಯ ಡೆಂಗ್ಯೂ ಪ್ರಕರಣಗಳು ಇದ್ದು, ಜುಲೈ ೭ ರ ಒಂದೇ ದಿನ ೧೫೯ ಹೊಸ ಪ್ರಕರಣಗಳು ಕಂಡು ಬಂದಿವೆ. ಇನ್ನು ಇದುವರೆಗೂ ರಾಜ್ಯದಲ್ಲಿ ೭೧೬೫ಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…