ಮೈಸೂರು ನಗರ

ಡೆಂಗ್ಯೂ ಪ್ರಕರಣಗಳಲ್ಲಿ ರಾಜ್ಯದಲ್ಲೇ ೨ನೇ ಸ್ಥಾನದಲ್ಲಿದೆ ಮೈಸೂರು

ಮೈಸೂರು : ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದರು ಕೂಡ ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಪ್ರತಿ ಜಿಲ್ಲೆಯಲ್ಲೂ ಕೂಡ ಒಂದಲ್ಲ ಒಂದು ಪ್ರಕರಣ ಪ್ರತಿದಿನ ಕಂಡುಬರುತ್ತಿದ್ದು, ಸಾಕಷ್ಟು ತಲೆನೋವಾಗಿ ಪರಿಣಮಿಸುವುದರ ಜೊತೆಗೆ ಆತಂಕ ಕೂಡ ಉಂಟುಮಾಡುತ್ತಿದೆ. ಕೇವಲ ಪ್ರಕರಣಗಳ ಸಂಖ್ಯೆ ಮಾತ್ರವಲ್ಲ ಒಬ್ಬರಲ್ಲ ಒಬ್ಬರು ಈ ಡೆಂಗ್ಯೂ ಮಾರಿಗೆ ಬಲಿಯಾಗುತ್ತಿದ್ದಾರೆ.

ಇನ್ನು ಸಾಂಸ್ಕೃತಿಕ ನಗರ ಮೈಸೂರು ಡೆಂಗ್ಯೂ ಪ್ರಕರಣಗಳಲ್ಲಿ ರಾಜ್ಯದಲ್ಲೇ ೨ನೇ ಸ್ಥಾನದಲ್ಲಿದೆ. ಬೆಂಗಳೂರು ನಂತರ ಮೈಸೂರಿನಲ್ಲಿಯೇ ಹೆಚ್ಚಿನ ಪ್ರಕರಣ ಕಂಡುಬಂದಿವೆ. ಮೈಸೂರಿನಲ್ಲಿ ೩೫ ಮಂದಿ ಈ ಡೆಂಗ್ಯೂ ಗೆ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಈ ಡೆಂಗ್ಯೂಯಿಂದ ಮೈಸೂರಿನಲ್ಲಿ ಇಬ್ಬರು ಬಲಿಯಾಗಿರುವುದು ನಿಜಕ್ಕೂ ಜನರಲ್ಲಿ ಸಾಕಷ್ಟು ಆತಂಕವನ್ನುಂಟು ಮಾಡಿದೆ. ಮೂರು ದಿನಗಳ ಹಿಂದೆಯಷ್ಟೆ ಹುಣಸೂರು ಸಮುದಾಯದ ಆರೋಗ್ಯ ಅಧಿಕಾರಿಯೊಬ್ಬರು ಡೆಂಗ್ಯೂಗೆ ಸಾವನ್ನಪ್ಪಿದ್ರು. ಕಳೆದ ಭಾನುವಾರ (ಜು೭ ) ಜಯದೇವ ಹೃದ್ರೋಗ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್‌ ಒಬ್ಬರು ಈ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ರಾಜ್ಯದಲ್ಲಿ ೩೦೧ ಸಕ್ರಿಯ ಡೆಂಗ್ಯೂ ಪ್ರಕರಣಗಳು ಇದ್ದು, ಜುಲೈ ೭ ರ ಒಂದೇ ದಿನ ೧೫೯ ಹೊಸ ಪ್ರಕರಣಗಳು ಕಂಡು ಬಂದಿವೆ. ಇನ್ನು ಇದುವರೆಗೂ ರಾಜ್ಯದಲ್ಲಿ ೭೧೬೫ಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

2 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

4 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

5 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

6 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

9 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago