ಮೈಸೂರು : ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದರು ಕೂಡ ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಪ್ರತಿ ಜಿಲ್ಲೆಯಲ್ಲೂ ಕೂಡ ಒಂದಲ್ಲ ಒಂದು ಪ್ರಕರಣ ಪ್ರತಿದಿನ ಕಂಡುಬರುತ್ತಿದ್ದು, ಸಾಕಷ್ಟು ತಲೆನೋವಾಗಿ ಪರಿಣಮಿಸುವುದರ ಜೊತೆಗೆ ಆತಂಕ ಕೂಡ ಉಂಟುಮಾಡುತ್ತಿದೆ. ಕೇವಲ ಪ್ರಕರಣಗಳ ಸಂಖ್ಯೆ ಮಾತ್ರವಲ್ಲ ಒಬ್ಬರಲ್ಲ ಒಬ್ಬರು ಈ ಡೆಂಗ್ಯೂ ಮಾರಿಗೆ ಬಲಿಯಾಗುತ್ತಿದ್ದಾರೆ.
ಇನ್ನು ಸಾಂಸ್ಕೃತಿಕ ನಗರ ಮೈಸೂರು ಡೆಂಗ್ಯೂ ಪ್ರಕರಣಗಳಲ್ಲಿ ರಾಜ್ಯದಲ್ಲೇ ೨ನೇ ಸ್ಥಾನದಲ್ಲಿದೆ. ಬೆಂಗಳೂರು ನಂತರ ಮೈಸೂರಿನಲ್ಲಿಯೇ ಹೆಚ್ಚಿನ ಪ್ರಕರಣ ಕಂಡುಬಂದಿವೆ. ಮೈಸೂರಿನಲ್ಲಿ ೩೫ ಮಂದಿ ಈ ಡೆಂಗ್ಯೂ ಗೆ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.
ಈ ಡೆಂಗ್ಯೂಯಿಂದ ಮೈಸೂರಿನಲ್ಲಿ ಇಬ್ಬರು ಬಲಿಯಾಗಿರುವುದು ನಿಜಕ್ಕೂ ಜನರಲ್ಲಿ ಸಾಕಷ್ಟು ಆತಂಕವನ್ನುಂಟು ಮಾಡಿದೆ. ಮೂರು ದಿನಗಳ ಹಿಂದೆಯಷ್ಟೆ ಹುಣಸೂರು ಸಮುದಾಯದ ಆರೋಗ್ಯ ಅಧಿಕಾರಿಯೊಬ್ಬರು ಡೆಂಗ್ಯೂಗೆ ಸಾವನ್ನಪ್ಪಿದ್ರು. ಕಳೆದ ಭಾನುವಾರ (ಜು೭ ) ಜಯದೇವ ಹೃದ್ರೋಗ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್ ಒಬ್ಬರು ಈ ಸೋಂಕಿಗೆ ಬಲಿಯಾಗಿದ್ದಾರೆ.
ಇನ್ನು ರಾಜ್ಯದಲ್ಲಿ ೩೦೧ ಸಕ್ರಿಯ ಡೆಂಗ್ಯೂ ಪ್ರಕರಣಗಳು ಇದ್ದು, ಜುಲೈ ೭ ರ ಒಂದೇ ದಿನ ೧೫೯ ಹೊಸ ಪ್ರಕರಣಗಳು ಕಂಡು ಬಂದಿವೆ. ಇನ್ನು ಇದುವರೆಗೂ ರಾಜ್ಯದಲ್ಲಿ ೭೧೬೫ಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…