ಮೈಸೂರು ನಗರ

ಡೆಂಗ್ಯೂ ಪ್ರಕರಣಗಳಲ್ಲಿ ರಾಜ್ಯದಲ್ಲೇ ೨ನೇ ಸ್ಥಾನದಲ್ಲಿದೆ ಮೈಸೂರು

ಮೈಸೂರು : ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದರು ಕೂಡ ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಪ್ರತಿ ಜಿಲ್ಲೆಯಲ್ಲೂ ಕೂಡ ಒಂದಲ್ಲ ಒಂದು ಪ್ರಕರಣ ಪ್ರತಿದಿನ ಕಂಡುಬರುತ್ತಿದ್ದು, ಸಾಕಷ್ಟು ತಲೆನೋವಾಗಿ ಪರಿಣಮಿಸುವುದರ ಜೊತೆಗೆ ಆತಂಕ ಕೂಡ ಉಂಟುಮಾಡುತ್ತಿದೆ. ಕೇವಲ ಪ್ರಕರಣಗಳ ಸಂಖ್ಯೆ ಮಾತ್ರವಲ್ಲ ಒಬ್ಬರಲ್ಲ ಒಬ್ಬರು ಈ ಡೆಂಗ್ಯೂ ಮಾರಿಗೆ ಬಲಿಯಾಗುತ್ತಿದ್ದಾರೆ.

ಇನ್ನು ಸಾಂಸ್ಕೃತಿಕ ನಗರ ಮೈಸೂರು ಡೆಂಗ್ಯೂ ಪ್ರಕರಣಗಳಲ್ಲಿ ರಾಜ್ಯದಲ್ಲೇ ೨ನೇ ಸ್ಥಾನದಲ್ಲಿದೆ. ಬೆಂಗಳೂರು ನಂತರ ಮೈಸೂರಿನಲ್ಲಿಯೇ ಹೆಚ್ಚಿನ ಪ್ರಕರಣ ಕಂಡುಬಂದಿವೆ. ಮೈಸೂರಿನಲ್ಲಿ ೩೫ ಮಂದಿ ಈ ಡೆಂಗ್ಯೂ ಗೆ ಚಿಕಿತ್ಸೆಯನ್ನು ಪಡೆದುಕೊಳ್ಳುತ್ತಿದ್ದಾರೆ.

ಈ ಡೆಂಗ್ಯೂಯಿಂದ ಮೈಸೂರಿನಲ್ಲಿ ಇಬ್ಬರು ಬಲಿಯಾಗಿರುವುದು ನಿಜಕ್ಕೂ ಜನರಲ್ಲಿ ಸಾಕಷ್ಟು ಆತಂಕವನ್ನುಂಟು ಮಾಡಿದೆ. ಮೂರು ದಿನಗಳ ಹಿಂದೆಯಷ್ಟೆ ಹುಣಸೂರು ಸಮುದಾಯದ ಆರೋಗ್ಯ ಅಧಿಕಾರಿಯೊಬ್ಬರು ಡೆಂಗ್ಯೂಗೆ ಸಾವನ್ನಪ್ಪಿದ್ರು. ಕಳೆದ ಭಾನುವಾರ (ಜು೭ ) ಜಯದೇವ ಹೃದ್ರೋಗ ಆಸ್ಪತ್ರೆಯ ಡಾಟಾ ಎಂಟ್ರಿ ಆಪರೇಟರ್‌ ಒಬ್ಬರು ಈ ಸೋಂಕಿಗೆ ಬಲಿಯಾಗಿದ್ದಾರೆ.

ಇನ್ನು ರಾಜ್ಯದಲ್ಲಿ ೩೦೧ ಸಕ್ರಿಯ ಡೆಂಗ್ಯೂ ಪ್ರಕರಣಗಳು ಇದ್ದು, ಜುಲೈ ೭ ರ ಒಂದೇ ದಿನ ೧೫೯ ಹೊಸ ಪ್ರಕರಣಗಳು ಕಂಡು ಬಂದಿವೆ. ಇನ್ನು ಇದುವರೆಗೂ ರಾಜ್ಯದಲ್ಲಿ ೭೧೬೫ಕ್ಕೆ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದೆ. ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

7 hours ago

ಸರಗೂರು | ಮತ್ತೆ ಹುಲಿ ದಾಳಿ ; ಬೋನು ಅಳವಡಿಸಲು ತೆರಳಿದ್ದ ಅರಣ್ಯ ಗಾರ್ಡ್‌ ಮೇಲೆ ಎರಗಿದ ಹುಲಿ

ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…

7 hours ago

ಎಸ್‌ಐಆರ್‌ | ರಾಜ್ಯಾದ್ಯಂತ ಏಕಕಾಲಕ್ಕೆ ಆರಂಭ ; ನಾಳೆಯಿಂದ ಮನೆ ಮನೆಗೆ ಭೇಟಿ

ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…

7 hours ago

ಮಾದಪ್ಪನ ದರ್ಶನ ಮುಗಿಸಿ ಬರುವಾಗ ಬಸ್‌ ಪಲ್ಟಿ : ಇಬ್ಬರು ಸಾವು ; ಹಲವರು ಗಂಭೀರ

ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…

9 hours ago

ಮೈಸೂರು | ವ್ಯಕ್ತಿ ಅನುಮಾನಾಸ್ಪದ ಸಾವು ; ಹೆಂಡತಿಯಿಂದಲೇ ಕೊಲೆಯ ಶಂಕೆ

ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…

11 hours ago

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…

12 hours ago