ಮೈಸೂರು : ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಕುಕ್ಕರಹಳ್ಳಿ ರೈಲ್ವೆ ಗೇಟ್ ಬಳಿ ನಡೆದಿದೆ.ಜ
ಭಾನುವಾರ ಸಂಜೆ ಈ ಘಟನೆ ನಡೆದಿದ್ದು, ಮೃತ ವ್ಯಕ್ತಿ ನಿವೃತ್ತ ಎಎಸ್ಐ ಎಂದು ತಿಳಿದುಬಂದಿದೆ. ಆದರೆ ಘಟನೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.
ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.





