ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು, ಇಂದು ಸಂಜೆ 5:30ರ ಒಳಗೆ ಅವರ ಅಂತಿಮ ವಿಧಿವಿಧಾನಗಳು ನೆರವೇರಲಿವೆ.
ಜಾನಕಿಯಮ್ಮ ಅವರು ಬದುಕಿದ್ದಾಗ, ತಮ್ಮ ನಿಧನದ ನಂತರ ತಮ್ಮ ನೆಚ್ಚಿನ ತೋಟದಲ್ಲೇ ಅಂತ್ಯಸಂಸ್ಕಾರ ಮಾಡಬೇಕೆಂದು ಆಸೆ ವ್ಯಕ್ತಪಡಿಸಿದ್ದರು. ಅವರ ಕೊನೆಯ ಕೋರಿಕೆಯಂತೆ ಕಣಿಯನಹುಂಡಿ ಗ್ರಾಮದಲ್ಲಿರುವ ಅವರ ತೋಟದಲ್ಲೇ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಹಾಗೂ ಅಧಿಕಾರಿಗಳು ನಿರ್ಧರಿಸಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಜೆಸಿಬಿ ಯಂತ್ರಗಳ ಮೂಲಕ ತೋಟದ ಜಾಗವನ್ನು ಸಮತಟ್ಟುಗೊಳಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಗ್ರಾಮದ ಮುಖಂಡ ಬಸವರಾಜು “ಸ್ವರ ಸಾಮ್ರಾಟೆ ಎಸ್. ಜಾನಕಿ ಅವರು ತಮ್ಮ ಬದುಕಿನ ಕಡೆಯ ದಿನಗಳನ್ನು ಕಣಿಯನಹುಂಡಿ ಗ್ರಾಮದಲ್ಲೇ ಕಳೆಯಲು ಗಟ್ಟಿ ನಿರ್ಧಾರ ಮಾಡಿದ್ದರು. ಇದೇ ಕಾರಣಕ್ಕಾಗಿ ಅವರು ಇಲ್ಲಿ ಎರಡು ಎಕರೆ ಜಮೀನನ್ನು ಖರೀದಿ ಮಾಡಿಸಿದ್ದರು. ನಾವೇ ಖುದ್ದಾಗಿ ನಿಂತು ಅವರಿಗೆ ಈ ಜಮೀನನ್ನು ಕೊಡಿಸಿದ್ದೆವು” ಎಂದು ತಿಳಿಸಿದರು.
“ಬಹಳ ಪ್ರೀತಿಯಿಂದ ಜಮೀನು ಕೊಂಡಿದ್ದ ಜಾನಕಿಯಮ್ಮ ಅವರು, ಅಲ್ಲಿ ತಮಗಾಗಿ ಒಂದು ಸುಂದರವಾದ ಮನೆಯನ್ನು ಕಟ್ಟುವ ಬಗ್ಗೆಯೂ ನಮ್ಮೊಂದಿಗೆ ಹಲವು ಬಾರಿ ಮಾತನಾಡಿದ್ದರು. ಆದರೆ ವಿಧಿಯ ಆಟ ಬೇರೆಯೇ ಆಗಿತ್ತು. ಕಡೆಯ ದಿನಗಳಲ್ಲಿ ಅವರು ಕಟ್ಟಬಯಸಿದ್ದ ಮನೆಯ ಜಾಗದಲ್ಲೇ, ಅವರ ಕೊನೆಯ ಆಸೆಯಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಲಿದೆ” ಎಂದು ಬಸವರಾಜು ಭಾವುಕರಾಗಿ ನುಡಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…