ಮೈಸೂರು ನಗರ

ಮೈಸೂರು: ವಕ್ಫ್‌ ತಿದ್ದುಪಡಿ ಮಸೂದೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಮೈಸೂರು: ಸಂಸತ್‌ನಲ್ಲಿ ವಕ್ಛ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದವರು ಪ್ರತಿಭಟನೆ ನಡೆಸಿದ್ದಾರೆ.

ನಗರದ ಪೈಲಟ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಎಸ್‌ಡಿಪಿಐ ಕಾರ್ಯಕರ್ತರು, ವಕ್ಛ್ ಮಸೂದೆ ಬಿಲ್ ಪ್ರತಿ ಹರಿದು ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಕ್ಛ್ ತಿದ್ದುಪಡಿ ಮಸೂದೆ ಮಂಡನೆ ಮಾಡಿದರೆ ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಈ ತಿದ್ದುಪಡಿ ಹಿಂಪಡೆಯುವವರೆಗೂ ನಮ್ಮ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಪಕ್ಷದ ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ಮಾತನಾಡಿ, ಕೇಂದ್ರ ಸರ್ಕಾರ ವಕ್ಛ್ ತಿದ್ದುಪಡಿ ಮಸೂದೆಯನ್ನು ‘ಊಮಿದ್‌‘ ಹೆಸರಿನಲ್ಲಿ ಮಂಡನೆ ಮಾಡಿದೆ. ಇದು ಸಂವಿಧಾನ ವಿರೋಧಿ ಮತ್ತು ಮುಸ್ಲಿಮರ ವಿರೋಧಿ ನಡೆಯಾಗಿದೆ ಎಂದು ದೂರಿದರು.

ಈ ದೇಶದ ರೈತರು, ಕಾರ್ಮಿಕರು, ದಲಿತರಿಗೆ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುತ್ತಾ ಬಂದ ಬಿಜೆಪಿ ಸರ್ಕಾರ ತನ್ನ ವ್ಯಾಪ್ತಿಯನ್ನು ಮತ್ತಷ್ಟು ಚಾಚಿ ಮುಸ್ಲಿಮರನ್ನು ಹತ್ತಿಕ್ಕಬೇಕು ಎಂದು ಪ್ರಯತ್ನಿಸುತ್ತಿದೆ. ಇದು ಎಂದಿಗೂ ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ವಕ್ಛ್ ಮಸೂದೆಗೆ ತಿದ್ದುಪಡಿ ತರಬೇಕು ಎಂಬ ಚರ್ಚೆ ಎದ್ದಾಗಲೇ ವಿರೋಧ ಪಕ್ಷಗಳು ದೊಡ್ಡ ಮಟ್ಟದಲ್ಲಿ ಧ್ವನಿ ಎತ್ತಿದವು. ಎಸ್‌ಡಿಪಿಐ ಕೂಡ ವಿರೋಧ ಮಾಡಿತ್ತು. ಈ ಸಂದರ್ಭದಲ್ಲಿ ಜಂಟಿ ಸದನ ಸಮಿತಿ ರಚನೆ ಮಾಡಿ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದರು. ಆದರೆ, ಆ ಜಂಟಿ ಸದನ ಸಮಿತಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸದೆ ಏಕಪಕ್ಷೀಯವಾಗಿ ತನ್ನ ವರದಿ ನೀಡಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ರಫತ್ ಖಾನ್, ಮುಖಂಡ ಅಜ್ಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಫಿರ್ದೋಸ್, ಉಪಾಧ್ಯಕ್ಷ ಸಫಿ, ನ್ಯಾಷನಲ್ ವಿಮ್ ಕೋ-ಆರ್ಡಿನೇಟರ್ ಫೈರೋಜ್, ಮಾಧ್ಯಮ ವಕ್ತಾರ ತಬ್ರೇಜ್ ಸೇಠ್ ಇನ್ನಿತರರು ಹಾಜರಿದ್ದರು.

 

 

 

ಆಂದೋಲನ ಡೆಸ್ಕ್

Recent Posts

ದ್ವಿತೀಯ ಪಿಯುಸಿ ಫಲಿತಾಂಶ: ಇದೊಂದು ಐತಿಹಾಸಿಕ ದಿನ ಎಂದ ಮಧು ಬಂಗಾರಪ್ಪ

ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…

11 hours ago

ಎರಡು ಕ್ಷೇತ್ರಗಳ ಉಪಚುನಾವಣೆ ಮತದಾನ ಮುಕ್ತಾಯ: ವೋಟಿಂಗ್‌ ಪ್ರಮಾಣವೆಷ್ಟು.?

ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…

12 hours ago

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹೈಕೋರ್ಟ್‌…

12 hours ago

ಬೆಂಗಳೂರಿನಲ್ಲಿ ಮುಂದಿನ ಮೂರು ದಿನ ಬಿಸಿ ಗಾಳಿ ಎಚ್ಚರಿಕೆ

ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…

12 hours ago

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆದ್ದರೆ ಆರು ಗ್ಯಾರಂಟಿ ಜಾರಿ: ಪ್ರಧಾನಿ ನರೇಂದ್ರ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…

12 hours ago

ಭಾರತ ತಲುಪಿದ ಗ್ರೀನ್‌ ಆಶಾ: 15,000 ಟನ್‌ ಎಲ್‌ಪಿಜಿ ಹೊತ್ತು ತಂದ ನೌಕೆ

ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್‌ ಎಲ್‌ಪಿಜಿ ಹೊತ್ತ ಟ್ಯಾಂಕರ್‌ ಹಾರ್ಮುಜ್‌ ಜಲಸಂಧಿಯನ್ನು…

12 hours ago