ಮೈಸೂರು ನಗರ

ಮೈಸೂರು: ವಕ್ಫ್‌ ತಿದ್ದುಪಡಿ ಮಸೂದೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಮೈಸೂರು: ಸಂಸತ್‌ನಲ್ಲಿ ವಕ್ಛ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)ದವರು ಪ್ರತಿಭಟನೆ ನಡೆಸಿದ್ದಾರೆ.

ನಗರದ ಪೈಲಟ್ ವೃತ್ತದಲ್ಲಿರುವ ಅಂಬೇಡ್ಕರ್ ಪ್ರತಿಮೆ ಬಳಿ ಬುಧವಾರ ಎಸ್‌ಡಿಪಿಐ ಕಾರ್ಯಕರ್ತರು, ವಕ್ಛ್ ಮಸೂದೆ ಬಿಲ್ ಪ್ರತಿ ಹರಿದು ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಕ್ಛ್ ತಿದ್ದುಪಡಿ ಮಸೂದೆ ಮಂಡನೆ ಮಾಡಿದರೆ ನಮ್ಮ ಹೋರಾಟ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಈ ತಿದ್ದುಪಡಿ ಹಿಂಪಡೆಯುವವರೆಗೂ ನಮ್ಮ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

ಪಕ್ಷದ ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ಮಾತನಾಡಿ, ಕೇಂದ್ರ ಸರ್ಕಾರ ವಕ್ಛ್ ತಿದ್ದುಪಡಿ ಮಸೂದೆಯನ್ನು ‘ಊಮಿದ್‌‘ ಹೆಸರಿನಲ್ಲಿ ಮಂಡನೆ ಮಾಡಿದೆ. ಇದು ಸಂವಿಧಾನ ವಿರೋಧಿ ಮತ್ತು ಮುಸ್ಲಿಮರ ವಿರೋಧಿ ನಡೆಯಾಗಿದೆ ಎಂದು ದೂರಿದರು.

ಈ ದೇಶದ ರೈತರು, ಕಾರ್ಮಿಕರು, ದಲಿತರಿಗೆ ಒಂದಿಲ್ಲೊಂದು ರೀತಿಯಲ್ಲಿ ತೊಂದರೆ ಕೊಡುತ್ತಾ ಬಂದ ಬಿಜೆಪಿ ಸರ್ಕಾರ ತನ್ನ ವ್ಯಾಪ್ತಿಯನ್ನು ಮತ್ತಷ್ಟು ಚಾಚಿ ಮುಸ್ಲಿಮರನ್ನು ಹತ್ತಿಕ್ಕಬೇಕು ಎಂದು ಪ್ರಯತ್ನಿಸುತ್ತಿದೆ. ಇದು ಎಂದಿಗೂ ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.

ವಕ್ಛ್ ಮಸೂದೆಗೆ ತಿದ್ದುಪಡಿ ತರಬೇಕು ಎಂಬ ಚರ್ಚೆ ಎದ್ದಾಗಲೇ ವಿರೋಧ ಪಕ್ಷಗಳು ದೊಡ್ಡ ಮಟ್ಟದಲ್ಲಿ ಧ್ವನಿ ಎತ್ತಿದವು. ಎಸ್‌ಡಿಪಿಐ ಕೂಡ ವಿರೋಧ ಮಾಡಿತ್ತು. ಈ ಸಂದರ್ಭದಲ್ಲಿ ಜಂಟಿ ಸದನ ಸಮಿತಿ ರಚನೆ ಮಾಡಿ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದರು. ಆದರೆ, ಆ ಜಂಟಿ ಸದನ ಸಮಿತಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸದೆ ಏಕಪಕ್ಷೀಯವಾಗಿ ತನ್ನ ವರದಿ ನೀಡಿದೆ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ರಫತ್ ಖಾನ್, ಮುಖಂಡ ಅಜ್ಜು, ರಾಜ್ಯ ಪ್ರಧಾನ ಕಾರ್ಯದರ್ಶಿ ಫಿರ್ದೋಸ್, ಉಪಾಧ್ಯಕ್ಷ ಸಫಿ, ನ್ಯಾಷನಲ್ ವಿಮ್ ಕೋ-ಆರ್ಡಿನೇಟರ್ ಫೈರೋಜ್, ಮಾಧ್ಯಮ ವಕ್ತಾರ ತಬ್ರೇಜ್ ಸೇಠ್ ಇನ್ನಿತರರು ಹಾಜರಿದ್ದರು.

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

5 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

5 hours ago