ಮೈಸೂರು ನಗರ

ಮೈಸೂರು| ಕರ್ತವ್ಯಕ್ಕೆ ಹಾಜರಾದ ಭದ್ರತಾ ಸಿಬ್ಬಂದಿ ಕುಸಿದು ಬಿದ್ದು ಸಾವು

ಮೈಸೂರು: ಕರ್ತವ್ಯಕ್ಕೆ ಹಾಜರಾದ ಭದ್ರತಾ ಸಿಬ್ಬಂದಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರು ಪ್ರಾಚ್ಯ ವಿದ್ಯಾ ಸಂಶೋಧನಾಲಯದ ಬಳಿ ನಡೆದಿದೆ.

ಸಂಜಯ್ ಎಂಬುವರೇ ಸಾವನ್ನಪ್ಪಿದ ಭದ್ರತಾ ಸಿಬ್ಬಂದಿಯಾಗಿದ್ದು, ಅನಾರೋಗ್ಯವಿದ್ದರೂ ಕೆಲಸಕ್ಕೆ ಹಾಜರಾದ ಸಂಜಯ್ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿ: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ

ವಿಶ್ವವಿದ್ಯಾನಿಲಯದಲ್ಲಿ ಈ ಹಿಂದಿನ ಗುತ್ತಿಗೆದಾರನಂತೆ ಭದ್ರತಾ ಕಾರ್ಮಿಕರ ಹಾಲಿ ಗುತ್ತಿಗೆ ಪಡೆದಿರುವ SRR ಎಂಬ ಬೆಂಗಳೂರು ಮೂಲದ ಏಜೆನ್ಸಿಯು ಕಳೆದ ಹತ್ತು ದಿನಗಳಿಂದ ವಾರದ ರಜೆ ನೀಡದೆ ಸಿಬ್ಬಂದಿಗಳಿಂದ ಕೆಲಸ ಮಾಡಿಸಿಕೊಂಡು ಬಂದಿರುತ್ತಾರೆ. ಈ ವಿಚಾರವಾಗಿ AIUTUC ವತಿಯಿಂದ ಆರು ದಿನ ಕೆಲಸ ಮಾಡುವ ಕಾರ್ಮಿಕರಿಗೆ ಒಂದು ದಿನ ವಾರದ ರಜೆಯಾಗಿ ನೀಡಲು ಒತ್ತಾಯಿಸಿದ್ದಾರೆ. ಆದರೆ ಗುತ್ತಿಗೆದಾರರು ಭದ್ರತಾ ಕಾರ್ಮಿಕರಿಗೆ ರಜೆಗಳು ಇರುವುದಿಲ್ಲ ಎಲ್ಲಾ ಸಮಯದಲ್ಲಿಯೂ ಕೆಲಸ ಮಾಡಬೇಕಾಗುತ್ತದೆ ಎಂಬ ದುರಹಂಕಾರದ ಮಾತುಗಳನ್ನು ಆಡಿದ್ದಾರೆ. ಈ ವಿಷಯದ ಕುರಿತು ನಿನ್ನೆ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಮಿಕರನ್ನು ವಜಾಗೊಳಿಸುವುದಾಗಿ ಏಜೆನ್ಸಿ ಅಧಿಕೃತ ಪತ್ರ ನೀಡಿದೆ ಮತ್ತು ಕೆಲಸ ನಿರಾಕರಣೆ ಮಾಡುವಂತೆ ಆದೇಶಿಸಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಸಂಜಯ್ ವಾರದ ರಜೆ ಕೇಳಿದ್ದಾರೆ. ಇದಕ್ಕೆ ಒಪ್ಪದ ಮೇಲ್ವಿಚಾರಕರು ಕೆಲಸ ಬೇಕಾದರೆ ಕೆಲಸ ಮಾಡು ಇಲ್ಲದಿದ್ದರೆ ಮನೆಗೆ ಹೋಗು, ನಾಳೆಯಿಂದ ಬರಬೇಡ ಎಂದು ಹೆದರಿಸಿದ್ದಾನೆ. ಅನಿವಾರ್ಯವಾಗಿ ಅದೇ ಸ್ಥಿತಿಯಲ್ಲಿ ಸಂಜಯ್ ತನ್ನ ಕೆಲಸದ ಸ್ಥಳಕ್ಕೆ ಹೋಗಿದ್ದಾರೆ. ಅನಾರೋಗ್ಯದಲ್ಲೂ ಕೆಲಸಕ್ಕೆ ಬಂದ ಸಂಜಯ್ ಪ್ರಾಚ್ಯವಿದ್ಯಾ ಸಂಶೋಧನಾಲಯ ಮೆಟ್ಟಿಲುಗಳ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಸಾವಿಗೆ ಯಾರನ್ನು ಹೊಣೆ ಮಾಡಬೇಕು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

17 mins ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

17 mins ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

1 hour ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

1 hour ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

2 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

3 hours ago