ಮೈಸೂರು: ಕರ್ತವ್ಯಕ್ಕೆ ಹಾಜರಾದ ಭದ್ರತಾ ಸಿಬ್ಬಂದಿ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರು ಪ್ರಾಚ್ಯ ವಿದ್ಯಾ ಸಂಶೋಧನಾಲಯದ ಬಳಿ ನಡೆದಿದೆ.
ಸಂಜಯ್ ಎಂಬುವರೇ ಸಾವನ್ನಪ್ಪಿದ ಭದ್ರತಾ ಸಿಬ್ಬಂದಿಯಾಗಿದ್ದು, ಅನಾರೋಗ್ಯವಿದ್ದರೂ ಕೆಲಸಕ್ಕೆ ಹಾಜರಾದ ಸಂಜಯ್ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಇದನ್ನು ಓದಿ: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ನಿಧನ
ವಿಶ್ವವಿದ್ಯಾನಿಲಯದಲ್ಲಿ ಈ ಹಿಂದಿನ ಗುತ್ತಿಗೆದಾರನಂತೆ ಭದ್ರತಾ ಕಾರ್ಮಿಕರ ಹಾಲಿ ಗುತ್ತಿಗೆ ಪಡೆದಿರುವ SRR ಎಂಬ ಬೆಂಗಳೂರು ಮೂಲದ ಏಜೆನ್ಸಿಯು ಕಳೆದ ಹತ್ತು ದಿನಗಳಿಂದ ವಾರದ ರಜೆ ನೀಡದೆ ಸಿಬ್ಬಂದಿಗಳಿಂದ ಕೆಲಸ ಮಾಡಿಸಿಕೊಂಡು ಬಂದಿರುತ್ತಾರೆ. ಈ ವಿಚಾರವಾಗಿ AIUTUC ವತಿಯಿಂದ ಆರು ದಿನ ಕೆಲಸ ಮಾಡುವ ಕಾರ್ಮಿಕರಿಗೆ ಒಂದು ದಿನ ವಾರದ ರಜೆಯಾಗಿ ನೀಡಲು ಒತ್ತಾಯಿಸಿದ್ದಾರೆ. ಆದರೆ ಗುತ್ತಿಗೆದಾರರು ಭದ್ರತಾ ಕಾರ್ಮಿಕರಿಗೆ ರಜೆಗಳು ಇರುವುದಿಲ್ಲ ಎಲ್ಲಾ ಸಮಯದಲ್ಲಿಯೂ ಕೆಲಸ ಮಾಡಬೇಕಾಗುತ್ತದೆ ಎಂಬ ದುರಹಂಕಾರದ ಮಾತುಗಳನ್ನು ಆಡಿದ್ದಾರೆ. ಈ ವಿಷಯದ ಕುರಿತು ನಿನ್ನೆ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾರ್ಮಿಕರನ್ನು ವಜಾಗೊಳಿಸುವುದಾಗಿ ಏಜೆನ್ಸಿ ಅಧಿಕೃತ ಪತ್ರ ನೀಡಿದೆ ಮತ್ತು ಕೆಲಸ ನಿರಾಕರಣೆ ಮಾಡುವಂತೆ ಆದೇಶಿಸಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಂಜಯ್ ವಾರದ ರಜೆ ಕೇಳಿದ್ದಾರೆ. ಇದಕ್ಕೆ ಒಪ್ಪದ ಮೇಲ್ವಿಚಾರಕರು ಕೆಲಸ ಬೇಕಾದರೆ ಕೆಲಸ ಮಾಡು ಇಲ್ಲದಿದ್ದರೆ ಮನೆಗೆ ಹೋಗು, ನಾಳೆಯಿಂದ ಬರಬೇಡ ಎಂದು ಹೆದರಿಸಿದ್ದಾನೆ. ಅನಿವಾರ್ಯವಾಗಿ ಅದೇ ಸ್ಥಿತಿಯಲ್ಲಿ ಸಂಜಯ್ ತನ್ನ ಕೆಲಸದ ಸ್ಥಳಕ್ಕೆ ಹೋಗಿದ್ದಾರೆ. ಅನಾರೋಗ್ಯದಲ್ಲೂ ಕೆಲಸಕ್ಕೆ ಬಂದ ಸಂಜಯ್ ಪ್ರಾಚ್ಯವಿದ್ಯಾ ಸಂಶೋಧನಾಲಯ ಮೆಟ್ಟಿಲುಗಳ ಮೇಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಈ ಸಾವಿಗೆ ಯಾರನ್ನು ಹೊಣೆ ಮಾಡಬೇಕು ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…