ಮೈಸೂರು: ರಸ್ತೆ ಅಗಲೀಕರಣದ ಹೆಸರೇಳಿ ಹೈದರ್ ಅಲಿ ರಸ್ತೆಯಲ್ಲಿ 40 ಮರಗಳನ್ನು ಕಡಿದಿರುವ ಪ್ರಕರಣದ ವಾಸ್ತವತೆ ಪರಿಶೀಲನೆ ನಡೆಸಲು ಜಿಲ್ಲಾಡಳಿತ ಸಮಿತಿಯೊಂದನ್ನು ರಚನೆ ಮಾಡಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಜಿಲ್ಲಾಧಿಕಾರಿ ಕಚೇರಿಯು, ರಾತ್ರೋರಾತ್ರಿ ಮರಗಳನ್ನು ಕಡಿದಿರುವ ಪ್ರಕರಣದ ಕುರಿತು ಮಾಧ್ಯಮ, ಪರಿಸರ ವಾದಿಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ ಹಾಗೂ ಪ್ರತಿಭಟನೆ ನಡೆಯುತ್ತಿವೆ.
ಈ ಹಿನ್ನೆಲೆಯ್ಲಲಿ ಮರಗಳನ್ನು ಕಡಿದಿರುವ ಪ್ರಕರಣದ ವಾಸ್ತವತೆ ಪರಿಶೀಲಿಸಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮೂರು ಸದಸ್ಯರನ್ನು ಒಳಗೊಂಡ ತನಿಖಾ ಸಮಿತಿ ರಚಿಸಲಾಗಿದ್ದು, ವಾರದೊಳಗೆ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.




