ಮೈಸೂರು: ಇಲ್ಲಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ. ಉದಯಗಿರಿ ಗಲಭೆಯಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯ ಲೋಪ ಕಾರಣ ಎಂಬ ಸಚಿವ ರಾಜಣ್ಣ ಹೇಳಿಕೆಗೆ ಸಿಎಂ ಉತ್ತರ ಕೊಡುತ್ತಾರೆ. ಈ ಬಗ್ಗೆ ಇನ್ನು 8-10 ದಿನಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರೇ ಉತ್ತರ ಕೊಡುತ್ತಾರೆ. ಇದರಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೊಲೀಸರು ಮುಂದೆ ಆಗಬಹುದಾದ ಅನಾಹುತ ತಪ್ಪಿಸಿದ್ದಾರೆ ಎಂದರು.
ಘಟನೆಯಲ್ಲಿ ಹಲವರು ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದು, ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಹೇಳಿದರು.
ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆದಿರುವವರೆಲ್ಲರೂ 14ರಿಂದ 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಪೊಲೀಸರು ಗಲಭೆ ಮಾಡಿದವರನ್ನು ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ತಪ್ಪು ಮಾಡಿರುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುತ್ತಾರೆ ಎಂದು ಎಚ್ಚರಿಕೆ ನೀಡಿದರು.
ನವದೆಹಲಿ: ಮದರ್ ಆಫ್ ಆಲ್ ಡೀಲ್ಸ್ ಎಂದೇ ಕರೆಯಲ್ಪಡುವ ಭಾರತ-ಯುರೋಪ್ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…
ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…
ಪಿರಿಯಾಪಟ್ಟಣ: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…
ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…
ಮಂಡ್ಯ: ಸಾಮಾಜಿಕವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಶಿಕ್ಷಣದಿಂದ ಮಾತ್ರ ಸಾಧ್ಯ…